Webdunia - Bharat's app for daily news and videos

Install App

ವಿಶ್ವವಿಖ್ಯಾತ 407ನೇ ದಸರಾ ಜಂಬೂಸವಾರಿಗೆ ಚಾಲನೆ

Webdunia
ಶನಿವಾರ, 30 ಸೆಪ್ಟಂಬರ್ 2017 (18:13 IST)
ಮೈಸೂರು: ವಿಶ್ವವಿಖ್ಯಾತ 407ನೇ ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಸಂಜೆ 4.45ರ ಶುಭ ಕುಂಭ ಲಗ್ನದಲ್ಲಿ ಸಿಎಂ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿದ್ದ ನಾಡದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಷನೆ ಮಾಡಿದರು. ಇದಕ್ಕೆಂದೆ ಅರಮನೆ ಮುಂಭಾಗದಲ್ಲಿ ವಿಶೇಷ ವೇದಿಕೆ ಹಾಕಲಾಗಿತ್ತು. ಮೇಯರ್ ರವಿಕುಮಾರ್, ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಜಿಲ್ಲಾಧಿಕಾರಿ ಡಿ.ರಂದೀಪ್ ಇದೇ ವೇಳೆ ಉಪಸ್ಥಿತರಿದ್ದರು.

ಇದಕ್ಕೂ ಮೊದಲು 2.15ರ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಸಚಿವರ ಜತೆ ಸೇರಿ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿ, ಜಂಬೂಸವಾರಿಯ ಮೆರವಣಿಗೆಗೆ ಚಾಲನೆ ನೀಡಿದರು.

ಅಲ್ಲದೆ ಈ ಬಾರಿ ಜಂಬೂಸವಾರಿಯ ಮೆರವಣಿಗೆಯಲ್ಲಿ 40 ಸ್ತಬ್ಧ ಚಿತ್ರಗಳು, 60 ಕಲಾತಂಡಗಳು ಭಾಗವಹಿಸಿದ್ದವು. ಜಂಬೂಸವಾರಿ ವೀಕ್ಷಣೆಗೆ ಅರಮನೆ ಮುಂಭಾಗ ಹಾಗೂ ಮೆರವಣಿಗೆ ಸಾಗುವ ಬನ್ನಿಮಂಟಪದವರೆಗೂ ಜನ ಸಮೂಹ  ಸೇರಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಎಲ್ಲರ ಬಾಸ್ ಎಂದು ಹೇಳುವವರಿಗೆ ನಮ್ ಕಂಡ್ರೆ ಹೊಟ್ಟೆ ಉರಿ: ಅಮೆರಿಕಾಗೆ ರಾಜನಾಥ್ ಸಿಂಗ್ ಟಾಂಗ್

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಮುಂದಿನ ಸುದ್ದಿ
Show comments