Publish Date: Sat, 01 Sep 2018 (20:25 IST)
Updated Date: Sat, 01 Sep 2018 (20:28 IST)
ವಿಶ್ವವಿಖ್ಯಾತ ಮೈಸೂರು ದಸರಾ ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಈ ಬಾರಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.
ದಸರಾ ಹಿನ್ನೆಲೆಯಲ್ಲಿ ಪ್ರಮುಖ ಆಕರ್ಷಣೆ ಆಗಿರುವ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಆನೆಗಳ ಪಯಣಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯುತ್ತಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮತ್ತಿಗೋಡು, ಬಳ್ಳೆ, ಕೊಡಗಿನ ದುಬಾರೆ, ಕೆ.ಗುಡಿ ಶಿಬಿರಗಳಲ್ಲಿ ಆನೆಗಳಿಗೆ ವಿಶೇಷ ಆರೈಕೆ ಆರಂಭಗೊಂಡಿದೆ. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ ನೀಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.