Webdunia - Bharat's app for daily news and videos

Install App

ದಾಸರಹಳ್ಳಿ ಶಾಸಕ ಮಂಜುನಾಥ್ ಬಂಧನ

Webdunia
ಸೋಮವಾರ, 25 ಅಕ್ಟೋಬರ್ 2021 (18:28 IST)
ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದಂತ ಮನೆಗಳನ್ನೇ, ಪೊಲೀಸರ ನೆರವಿನಿಂದ ಬಿಡಿಎ ಅಧಿಕಾರಿಗಳು ಅಕ್ರಮದ ಹೆಸರಿನಲ್ಲಿ ನೆಲಸಮ ಮಾಡಲು ತೊಡಗಿದ್ದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದಂತ ಜೆಡಿಎಸ್ ಶಾಸಕ ಮಂಜುನಾಥ್ ಅವರು ನೆಲಸಮ ಕಾರ್ಯಾಚರಣೆ ಅಡ್ಡಿ ಪಡಿಸಿದ್ದಾರೆ. ಇದರಿಂದ ಸ್ಥಳದಲ್ಲಿದ್ದಂತ ಪೊಲೀಸರು ಅವರನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.
 
ಈ ಕುರಿತಂತೆ ಹಿರಿಸಾವೆಯಲ್ಲಿ ಸುದ್ದಿಗಾರರೊಂದಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡಿನೀಯ ಎಂದು ಹೇಳಿದರು.
 
'ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments