ಸಾಲ ಮರುಪಾವತಿ ಮಾಡುವಂತೆ ಅವಾಚ್ಯ ಶಬ್ದಗಳಿಂದ ತಂದೆಗೆ ಕಿರುಕುಳ ನೀಡುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮರದೂರು ಮೂಲದ ಶಿವನಾಯ್ಕ ಎಂಬುವರು ಕುಮಾರ್ ಮತ್ತು ಮಮತಾ ಎಂಬುವರಿಂದ 30,000 ರೂಪಾಯಿ ಮೀಟರ್ ಬಡ್ಡಿಯ ಮೇಲೆ ಸಾಲ ಪಡೆದಿದ್ದರು. ಸಾಲ ನೀಡಿದವರು ಮರುಪಾವತಿಸುವಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪ್ರತಿ ನಿತ್ಯ ಕಿರುಕುಳ ನೀಡಿತ್ತಿದ್ದರು. ಇದರಿಂದ ಮನನೊಂದ ಶಿವನಾಯ್ಕ ಅವರ ಪುತ್ರಿ ರೋಜಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವನಾಯಕ್ ಹಾಗೂ ಮಹಾದೇವಿ ದಂಪತಿಯ ಪುತ್ರಿ ರೋಜಾ ಮೃತ ದುರ್ದೈವಿಯಾಗಿದ್ದು, ಬಿಳಿಕೆರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.