Select Your Language

Notifications

webdunia
webdunia
webdunia
webdunia

ಮಗಳ ತಾಳಿಯನ್ನೇ ಕಿತ್ತ ತಂದೆ! ಮುಂದೇನಾಯ್ತು?

ಮಗಳ ತಾಳಿಯನ್ನೇ ಕಿತ್ತ ತಂದೆ! ಮುಂದೇನಾಯ್ತು?
ಮೈಸೂರು , ಮಂಗಳವಾರ, 21 ಡಿಸೆಂಬರ್ 2021 (08:49 IST)
ಮೈಸೂರು : ಸಿನಿಮಾ ಕಥೆಯ ಮಾದರಿ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
 
ನಂಜನಗೂಡು ತಾಲೂಕು ಹರತಲೆ ಗ್ರಾಮದ ಯುವತಿ ಹಲ್ಲರೆ ಗ್ರಾಮದ ಮಹೇಂದ್ರ ಎಂಬವರನ್ನು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ನಂತರ ಡಿಸೆಂಬರ್ 8 ರಂದು ಮದುವೆಯಾಗಿದ್ದಾರೆ. ನಂತರ ನಂಜನಗೂಡಿನ ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹವನ್ನ ನೊಂದಾಯಿಸಿಕೊಳ್ಳಲು ಬಂದಿದ್ದಾರೆ.

ನೋಂದಣಿ ಪ್ರಕ್ರಿಯೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆಯೇ ಯುವತಿ ತಂದೆ ಬಸವರಾಜ ನಾಯ್ಕ್ ಪ್ರತ್ಯಕ್ಷವಾಗಿ ಮಗಳ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಹಾಕಿ ಜುಟ್ಟು ಹಿಡಿದು ಮನೆಗೆ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ.

ಈ ವೇಳೆ ಸಾರ್ವವನಿಕರು ಮಧ್ಯೆ ಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ ಮತ್ತು ಯುವತಿ ತನ್ನ ತಂದೆಯಿಂದಲೇ ತನಗೆ ರಕ್ಷಣೆ ಬೇಕೆಂದು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಡಬ್ಲ್ಯುಎಫ್ ಗೌರವ: ಪಿ. ವಿ ಸಿಂಧುಗೆ ಮತ್ತೊಂದು ಗರಿ