Webdunia - Bharat's app for daily news and videos

Install App

ಲವರ್ ಜತೆ ಓಡಿಹೋದ ಮಗಳು; ಮೊಮ್ಮಗನನ್ನ ಕೆರೆಗೆ ಹಾಕಿದ ಅಜ್ಜಿ

Webdunia
ಮಂಗಳವಾರ, 24 ಸೆಪ್ಟಂಬರ್ 2019 (16:16 IST)
ಪ್ರಿಯಕರನೊಂದಿಗೆ ಓಡಿಹೋದ ಮಗಳ ಮೇಲಿನ ಸಿಟ್ಟಿನಿಂದಾಗಿ ಮೊಮ್ಮಗನನ್ನು ಕೆರೆಗೆ ತಳ್ಳಿ ದಾರುಣವಾಗಿ ಕೊಲೆ ಮಾಡಿ ಸಾಯಿಸಿದ್ದಾಳೆ ಅಜ್ಜಿ. 

ಮಂಡ್ಯದ ಶೀಳನೆರೆ ಹೋಬಳಿಯ ಮಾರುತಿನಗರದಲ್ಲಿ ವಾಸವಾಗಿದ್ದರು ಸಾವಿತ್ರಮ್ಮ ಹಾಗೂ ಅವರ ಮಗಳು  
ಲಕ್ಷ್ಮಿ. ಅಲ್ಲಿಯೇ ಇರುವ ಸರ್ಕಾರಿ ಶಾಲೆಯಲ್ಲಿ ತಮ್ಮ ಮಗ ಪ್ರಜ್ವಲ್(11)ನನ್ನು ಲಕ್ಷ್ಮಿ ಶಾಲೆಗೆ ದಾಖಲಿಸಿದ್ದರು.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಪ್ರಜ್ವಲ್,  ತನ್ನ ಮೊಮ್ಮಗ ಪ್ರಜ್ವಲ್ ನನ್ನು ಕಳಿಸಿಕೊಡುವಂತೆ ಮಧ್ಯಾಹ್ನ ಶಾಲೆಗೆ ಹೋಗಿ ಶಾಲಾ ಶಿಕ್ಷಕಿಯಲ್ಲಿ ಮನವಿ ಮಾಡಿದ ಅಜ್ಜಿ, ಹಬ್ಬಕ್ಕೆ ಹೋಗಬೇಕೆಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ತನ್ನ ಜೊತೆಯಿದ್ದ ಮಗಳು ಲಕ್ಷ್ಮಿ ಫೇಸ್ ಬುಕ್ ನಲ್ಲಿ ಪರಿಚಯವಾದ ಪ್ರಿಯಕರನೊಂದಿಗೆ ಓಡಿಹೋಗಿದ್ದಳು.

ಈ ಹಿನ್ನೆಲೆಯಲ್ಲಿ ತನ್ನ ಜೊತೆ ಇದ್ದ ಮೊಮ್ಮಗ ಪ್ರಜ್ವಲ್ ನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿಕೊಂಡು ಸಮೀಪದ ಸಿಂದಘಟ್ಟ ಕೆರೆಗೆ ಮೊಮ್ಮಗನನ್ನು ತಳ್ಳಿದ್ದಾಳೆ. ಆ ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಲು ಸಿದ್ಧವಾಗುತ್ತಿದ್ದಾಗ ಮಾರುತಿನಗರ ನಿವಾಸಿಗಳು ಹಿಡಿದು ಕೆ.ಆರ್.ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೃತ ಶಾಲಾ ವಿದ್ಯಾರ್ಥಿ ಪ್ರಜ್ವಲ್ ನ ಮೃತದೇಹದ ಪತ್ತೆಗೆ ಸಿಂದಘಟ್ಟ ಕೆರೆಯ ಬಳಿ ಶೋಧನೆ ನಡೆದಿದೆ. 
ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ತನಿಖೆ ಕೈಗೊಂಡಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments