Publish Date: Mon, 04 May 2026 (09:27 IST)
Updated Date: Mon, 04 May 2026 (09:30 IST)
ದಾವಣಗೆರೆ: ಕರ್ನಾಟಕದ ದಾವಣಗೆರೆ ಉಪಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆಯಾಗಿದ್ದು ಬಿಗ್ ಟ್ವಿಸ್ಟ್ ಸಿಕ್ಕಿದೆ.
ದಾವಣಗೆರೆಯಲ್ಲಿ ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶ್ಯಾಮನೂರು ಕೆಲವೇ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರು. ಇಲ್ಲಿ ಮುಸ್ಲಿಂ ಮತದಾರರ ಅಸಮಾಧಾನದ ಹೊರತಾಗಿಯೂ ಸಮರ್ಥ್ ಮುನ್ನಡೆಯಲ್ಲಿದ್ದಿದ್ದು ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್ ಆಗಿತ್ತು.
ಆದರೆ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಮುನ್ನಡೆಯಲ್ಲಿದ್ದಾರೆ. ಇದು ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ಇಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದರು.
ಆದರೆ ಬಾಗಲಕೋಟೆಯಲ್ಲಿ ಮೇಟಿ ಕುಟುಂಬವನ್ನು ಮತದಾರರು ಕೈ ಬಿಡುವಂತೆ ತೋರುತ್ತಿಲ್ಲ. ಇಲ್ಲಿ ಉಮೇಶ್ ಮೇಟಿ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ