Publish Date: Mon, 24 Aug 2026 (17:54 IST)
Updated Date: Mon, 24 Aug 2026 (18:02 IST)
ಬೆಂಗಳೂರು: ಕರ್ನಾಟಕದ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಲವು ದಿನಗಳಿಂದ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ವಿಧಾನಸಭೆಯ ಒಳಗೆ ಅನಿರ್ದಿಷ್ಟಾವಧಿಯ ಹಗಲು-ರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬಹುಕೋಟಿ ರೂಪಾಯಿ ಮೌಲ್ಯದ 'ಕರ್ನಾಟಕ ದಲಿತ ವಾಲ್ಮೀಕಿ ನಿಗಮ'ದ ಹಗರಣದಲ್ಲಿ ದಲಿತರ 180 ಕೋಟಿ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾದ ನಾಗೇಂದ್ರ ಅವರನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ದೂರಿದರು.
"ಕಳೆದ ವಾರದಿಂದ ನಾವು ಧರಣಿ ನಡೆಸುತ್ತಿದ್ದೇವೆ. ನಾವು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಕಾಂಗ್ರೆಸ್ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ದಲಿತರ 180 ಕೋಟಿ ರೂಪಾಯಿ ಹಣವನ್ನು ಲೂಟಿ ಮಾಡಿದ ನಾಗೇಂದ್ರ ಅವರನ್ನು ಅವರು ರಕ್ಷಿಸುತ್ತಿದ್ದಾರೆ. ಆ ಹಣ ದಲಿತರಿಗೆ ತಲುಪಬೇಕು ಎಂಬುದು ನಮ್ಮ ಆಗ್ರಹ. ಇದೇ ಕಾರಣಕ್ಕೆ ನಾನು ಇಂದು ನಿರ್ಧಾರ ಕೈಗೊಂಡಿದ್ದೇನೆ.ನಾವು ಹಗಲು-ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದೇವೆ. ಈಗಿನಿಂದಲೇ, ಈ ಕ್ಷಣದಿಂದಲೇ ನಾವು ವಿಧಾನಸಭೆಯಲ್ಲಿ ನಾಗೇಂದ್ರ ಅವರ ರಾಜೀನಾಮೆ ಆಗುವವರೆಗೂ ಹಗಲು-ರಾತ್ರಿ ಧರಣಿಯನ್ನು ಪ್ರಾರಂಭಿಸುತ್ತಿದ್ದೇವೆ," ಎಂದು ಅಶೋಕ್ ತಿಳಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ