Webdunia - Bharat's app for daily news and videos

Install App

ಇಂದಿನಿಂದ 3 ದಿನ ರಾಜ್ಯಾದ್ಯಂತ ಚಳಿ ಗಾಳಿ; ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

Webdunia
ಶುಕ್ರವಾರ, 24 ಡಿಸೆಂಬರ್ 2021 (17:55 IST)
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಡಿಸೆಂಬರ್ 26 ಮತ್ತು 27ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಡಿಸೆಂಬರ್ 27ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮಪಾತವಾಗಲಿದೆ.
ಬೆಂಗಳೂರು:- ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ತೀವ್ರವಾಗಿದೆ.
ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗಿದೆ. ಬೀದರ್ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳ ಕನಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಬೀದರ್​ನಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್​ಗೆ ಇಳಿದಿತ್ತು. ಬೆಂಗಳೂರಿನಲ್ಲೂ ಚಳಿ ತೀವ್ರವಾಗುತ್ತಿದೆ.
IMD ಹವಾಮಾನದ ಪ್ರಕಾರ, ಡಿಸೆಂಬರ್ 26ರಿಂದ ಡಿಸೆಂಬರ್ 28ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಡಿಸೆಂಬರ್ 26 ಮತ್ತು 27ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಡಿಸೆಂಬರ್ 27ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮಪಾತವಾಗಲಿದೆ. ಹವಾಮಾನ ಮುನ್ಸೂಚನಾ ಸಂಸ್ಥೆಯು ಡಿಸೆಂಬರ್ 26 ಮತ್ತು ಡಿಸೆಂಬರ್ 27ರಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಿದೆ.
ಡಿಸೆಂಬರ್ 27 ಮತ್ತು ಡಿಸೆಂಬರ್ 29ರ ನಡುವೆ ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಜಮ್ಮು, ಹಿಮಾಚಲ ಪ್ರದೇಶ, ಪಂಜಾಬ್‌ನ ಉತ್ತರ ಭಾಗಗಳು ಮತ್ತು ಹರಿಯಾಣದ ಮೇಲೆ 26ರಂದು ಮತ್ತು ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು ಡಿಸೆಂಬರ್ 27ರಂದು ಆಲಿಕಲ್ಲು ಮಳೆ ಬೀಳಬಹುದು.
ಇಂದಿನಿಂದ 2 ದಿನ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಇಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಇಂದಿನಿಂದ ಡಿಸೆಂಬರ್ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಡಿಸೆಂಬರ್ 27ರಂದು ಕಾಶ್ಮೀರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.
ಡಿಸೆಂಬರ್ 26ರಿಂದ 29ರವರೆಗೆ ವಾಯುವ್ಯ ಭಾರತದ ಪಕ್ಕದ ಬಯಲು ಪ್ರದೇಶಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ವಾಯುವ್ಯ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಶೀತ ಅಲೆ ಉಂಟಾಗಲಿದೆ. ಇಂದು ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಮತ್ತು ಪಂಜಾಬ್, ಹರಿಯಾಣ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಸೌರಾಷ್ಟ್ರ ಮತ್ತು ಕಚ್, ತೆಲಂಗಾಣ, ಬಿಹಾರ, ಜಾರ್ಖಂಡ್‌ನಲ್ಲಿ ಮಳೆಯಾಗಲಿದೆ.
ಇಂದಿನಿಂದ ಡಿಸೆಂಬರ್ 25ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಲಘುವಾಗಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಇಂದಿನಿಂದ ಡಿಸೆಂಬರ್ 25ರವರೆಗೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ. ಇಂದು ಪಂಜಾಬ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments