Webdunia - Bharat's app for daily news and videos

Install App

ಅಧಿಕಾರಿಗಳ ಮಾತು ಕೇಳಿ ಸರ್ಕಾರ ನಡೆಸಲು ಆಗುತ್ತಾ?

Webdunia
ಶುಕ್ರವಾರ, 2 ಜುಲೈ 2021 (17:48 IST)
ರೋಹಿಣಿ, ಶಿಲ್ಪಾನಾಗ್ ಗೆ ಸಿದ್ದು ಗುದ್ದು
ಅಧಿಕಾರಿಗಳ ಮಾತು ಕೇಳಿಕೊಂಡು ಸರಕಾರ ನಡೆಸಲು ಆಗುತ್ತಾ? ಶಾಸನ ಸಭೆಯಲ್ಲಿ ಉತ್ತರ ಕೊಡಬೇಕಾದವರು ನಾವು ಐಎಎಸ್ ಅಧಿಕಾರಿಗಳು ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಎಸ್ ಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಮೈಸೂರಿನಲ್ಲಿ ಗುರುವಾರ ಸುತ್ತೂರು ಶ್ರೀ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಮಾಧ್ಯಮಗಳ ಬಳಿ ಹೋಗುವುದೇ ತಪ್ಪು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಸ್ತು ಅಗತ್ಯ. ಈ ರೀತಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಹೋಗುವುದೇ ತಪ್ಪು ಎಂದು ಹೇಳಿದರು.
ಮೈಸೂರಿನಲ್ಲಿ ನನ್ನ ಆಡಳಿತದ ವೇಳೆ ಹೊಸ ಜಿಲ್ಲಾಧಿಕಾರಿ ಕಚೇರಿ ಉದ್ಘಾಟಿಸಿದ್ದೇನೆ. ಅಲ್ಲಿ ಇನ್ನೂ ಸಂಪೂರ್ಣವಾಗಿ ಹೊಸ ಕಚೇರಿಗೆ ಶಿಫ್ಟ್ ಆಗಿಲ್ಲ. ಡಿಸಿ ಮನೆ ಹತ್ತಿರ ಇದೇ ಎಂಬ ಕಾರಣಕ್ಕೆ ಎಲ್ಲರೂ ಹಳೆ ಕಚೇರಿಯಲ್ಲೇ ಉಳಿದಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments