Webdunia - Bharat's app for daily news and videos

Install App

ಡಿಸಿ, ಸಿಇಓ ಹಳ್ಳಿ ಪ್ರವಾಸ ಮಾಡೋದು ಕಡ್ಡಾಯ ಎಂದ ಸಚಿವ

Webdunia
ಬುಧವಾರ, 3 ಜುಲೈ 2019 (20:00 IST)
ಬಡ, ಕೂಲಿ ಕಾರ್ಮಿಕರ ಮತ್ತು ರೈತಾಪಿ ವರ್ಗದವರ ನೋವು ನಲಿವುಗಳನ್ನು ಆಲಿಸಲು ಮತ್ತು ಗ್ರಾಮೀಣ ಹಂತದಲ್ಲಿ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನವಾಗುತ್ತಿದಿಯೇ ಎಂಬುದನ್ನು ಅರಿಯಲು ಹಿರಿಯ ಅಧಿಕಾರಿಗಳು ಹಳ್ಳಿ ಪ್ರವಾಸ ಮಾಡೋದು ಕಡ್ಡಾಯ ಅಂತ ಸಚಿವ ಹೇಳಿದ್ದಾರೆ.

ಪ್ರಾದೇಶಿಕ ಆಯುಕ್ತರು,  ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ.ಗಳು ಕಡ್ಡಾಯವಾಗಿ ಹಳ್ಳಿ ಪ್ರವಾಸ ಮಾಡಬೇಕು ಅಂತ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬರ ಕಾಮಗಾರಿಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ದೇಶಪಾಂಡೆ, ಕಂದಾಯ ಇಲಾಖೆ ಮಾತೃ ಇಲಾಖೆಯಿದ್ದಂತೆ. ವೃದ್ಧಾಪ್ಯ, ವಿಧವಾ, ವಿಕಲಚೇತನ ವೇತನ, ಜಾತಿ-ಆದಾಯ ಪತ್ರ, ಪಹಣಿ, ಮುಟೇಷನ್, ಜಮೀನು ಪರಿವರ್ತನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಜನರು ಕಚೇರಿಗೆ ಬರುತ್ತಾರೆ. ವಿನಾಕಾರಣ ಸಾರ್ವಜನಿಕರನ್ನು ಅಲೆದಾಡಿಸದೇ ನಿಗದಿತ ಸಮಯದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಇದಕ್ಕಾಗಿ ಅಧಿಕಾರಿಗಳು ತುಂಬಾ ಕ್ರಿಯಾಶೀಲತೆಯಿಂದ ಇಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ ಅಂತಾ ಹೇಳಿದ್ರು.

ಬರ ಕಾಮಗಾರಿ ನಿರ್ವಹಣೆಗಾಗಿ ಜಿಲ್ಲೆಗೆ ಈಗಾಗಲೇ ಟಾಸ್ಕ್ ಫೋರ್ಸ್‍ನಡಿ ಪ್ರತಿ ತಾಲೂಕಿಗೆ 1.25 ಕೋಟಿ ರೂ.ಗಳಂತೆ ಅನುದಾನ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಇನ್ನು 12 ಕೋಟಿ ರು. ಅನುದಾನ ಲಭ್ಯವಿದೆ. ಅನುದಾನ ಬಳಸಿಕೊಂಡು ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತು ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಪ್ರತಿ ತಹಶೀಲ್ದಾರ ಖಾತೆಯಲ್ಲಿ ಕನಿಷ್ಠ 40 ಲಕ್ಷ ರೂ. ಅನುದಾನ ಅನುದಾನ ಇರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಸರಬರಾಜು ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments