Webdunia - Bharat's app for daily news and videos

Install App

ಕಬ್ಬು ಬಾಕಿ ಪಾವತಿ ಮಾಡಿ ಎಂದ ಡಿಸಿ

Webdunia
ಶನಿವಾರ, 29 ಸೆಪ್ಟಂಬರ್ 2018 (16:44 IST)
14 ದಿನಗಳಲ್ಲಿ ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕು. ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿ ಮಾಡುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ದಾಸ್ತಾನನ್ನು ವಶಕ್ಕೆ ಪಡೆಯುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. 

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ರೈತರು ಒಂದೆಡೆ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿಡಿದ್ದು, ಮತ್ತೊಂದೆಡೆ  ಸಕ್ಕರೆ ಕಾರ್ಖಾನೆಗಳು  ಕಬ್ಬಿನ ಹಣ ಪಾವತಿಸದೇ ಇರೋದು ರೈತರನ್ನ ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಮಂಡ್ಯ ಜಿಲ್ಲೆಯಲ್ಲಿ 5 ಕಾರ್ಖಾನೆಗಳಿದ್ದು, ಇದರಲ್ಲಿ ಒಂದು ಕಾರ್ಖಾನೆ ಮುಚ್ಚಿದೆ. ಇನ್ನು 4 ಕಾರ್ಖಾನೆಗಳು ರೈತರಿಗೆ 2018-19ನೇ ಅವಧಿಯಲ್ಲಿ 96.83 ಕೋಟಿ ರೂಪಾಯಿಗಳ ಬಾಕಿಯನ್ನು ಪಾವತಿಸಬೇಕಾಗಿದೆ. ಮದ್ದೂರು ತಾಲೂಕಿನ ಕೊಪ್ಪದ ಎನ್‌ಎಸ್‌ಎಲ್ ಕಾರ್ಖಾನೆ 37.80 ಕೋಟಿ, ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಕಾರ್ಖಾನೆ 25.80 ಕೋಟಿ, ಕೆ.ಆರ್.ಪೇಟೆ ತಾಲೂಕಿನ ಐಸಿಎಲ್ 28.69 ಕೋಟಿ ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ 4.84 ಕೋಟಿ ರೂಪಾಯಿಗಳ ಮೊತ್ತವನ್ನು ಪಾವತಿ ಮಾಡಬೇಕಾಗಿದೆ ಎಂದು ತಿಳಿದುಬಂದಿದೆ.

ರೈತರ ಸರಣಿ ಆತ್ಮಹತ್ಯೆ ಹಿನ್ನಲೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಪಾವತಿ ಮಾಡುವಂತೆ ಜಿಲ್ಲಾಧಿಕಾರಿ ಮಂಜುಶ್ರೀ ನೋಟಿಸ್ ನೀಡಿದ್ದಾರೆ. 14 ದಿನಗಳ ಗಡುವು ನೀಡಿದ್ದಾರೆ. ಒಂದು ವೇಳೆ ಪಾವತಿ ಮಾಡುವುದು ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿ ಮಾಡುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ದಾಸ್ತಾನನ್ನು ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments