Webdunia - Bharat's app for daily news and videos

Install App

ಕಬ್ಬು ಬಾಕಿ ಪಾವತಿ ಮಾಡಿ ಎಂದ ಡಿಸಿ

Webdunia
ಶನಿವಾರ, 29 ಸೆಪ್ಟಂಬರ್ 2018 (16:44 IST)
14 ದಿನಗಳಲ್ಲಿ ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕು. ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿ ಮಾಡುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ದಾಸ್ತಾನನ್ನು ವಶಕ್ಕೆ ಪಡೆಯುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. 

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ರೈತರು ಒಂದೆಡೆ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿಡಿದ್ದು, ಮತ್ತೊಂದೆಡೆ  ಸಕ್ಕರೆ ಕಾರ್ಖಾನೆಗಳು  ಕಬ್ಬಿನ ಹಣ ಪಾವತಿಸದೇ ಇರೋದು ರೈತರನ್ನ ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಮಂಡ್ಯ ಜಿಲ್ಲೆಯಲ್ಲಿ 5 ಕಾರ್ಖಾನೆಗಳಿದ್ದು, ಇದರಲ್ಲಿ ಒಂದು ಕಾರ್ಖಾನೆ ಮುಚ್ಚಿದೆ. ಇನ್ನು 4 ಕಾರ್ಖಾನೆಗಳು ರೈತರಿಗೆ 2018-19ನೇ ಅವಧಿಯಲ್ಲಿ 96.83 ಕೋಟಿ ರೂಪಾಯಿಗಳ ಬಾಕಿಯನ್ನು ಪಾವತಿಸಬೇಕಾಗಿದೆ. ಮದ್ದೂರು ತಾಲೂಕಿನ ಕೊಪ್ಪದ ಎನ್‌ಎಸ್‌ಎಲ್ ಕಾರ್ಖಾನೆ 37.80 ಕೋಟಿ, ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಕಾರ್ಖಾನೆ 25.80 ಕೋಟಿ, ಕೆ.ಆರ್.ಪೇಟೆ ತಾಲೂಕಿನ ಐಸಿಎಲ್ 28.69 ಕೋಟಿ ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ 4.84 ಕೋಟಿ ರೂಪಾಯಿಗಳ ಮೊತ್ತವನ್ನು ಪಾವತಿ ಮಾಡಬೇಕಾಗಿದೆ ಎಂದು ತಿಳಿದುಬಂದಿದೆ.

ರೈತರ ಸರಣಿ ಆತ್ಮಹತ್ಯೆ ಹಿನ್ನಲೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಪಾವತಿ ಮಾಡುವಂತೆ ಜಿಲ್ಲಾಧಿಕಾರಿ ಮಂಜುಶ್ರೀ ನೋಟಿಸ್ ನೀಡಿದ್ದಾರೆ. 14 ದಿನಗಳ ಗಡುವು ನೀಡಿದ್ದಾರೆ. ಒಂದು ವೇಳೆ ಪಾವತಿ ಮಾಡುವುದು ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿ ಮಾಡುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ದಾಸ್ತಾನನ್ನು ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments