ಡಿಸಿ ರೋಹಿಣಿ ಸಿಂಧೂರಿಗೆ ಸಾರ್ವಜನಿಕರ ಬೆಂಬಲ

Webdunia
ಶನಿವಾರ, 5 ಜೂನ್ 2021 (08:46 IST)
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಸಸ್ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜಟಾಪಟಿ ಪ್ರಕರಣದಲ್ಲಿ ರಾಜಕೀಯ ನಾಯಕರೂ ಎಂಟ್ರಿಯಾಗಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆಗೆ ರಾಜಕೀಯ ನಾಯಕರಿಂದ ಒತ್ತಡ ಕೇಳಿಬಂದಿದೆ.


ಈ ನಡುವೆ ಖಡಕ್ ಜಿಲ್ಲಾಧಿಕಾರಿ ಎಂದೇ ಪರಿಚಿತರಾಗಿದ್ದ ರೋಹಿಣಿ ಸಿಂಧೂರಿಗೆ ನೆಟ್ಟಿಗರಿಂದ ಬೆಂಬಲ ವ್ಯಕ್ತವಾಗಿದೆ. ರೋಹಿಣಿ ಸಿಂಧೂರಿ ಭ್ರಷ್ಟರ ವಿರುದ್ಧ ಹೋರಾಟಕ್ಕಿಳಿದಿದ್ದಕ್ಕೇ ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳಲು ಅವರ ವಿರುದ್ಧ ಆರೋಪ ಹೊರಿಸುತ್ತಿದ್ದಾರೆ.

ರೋಹಿಣಿ ಸಿಂಧೂರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಭೂ ಮಾಫಿಯಾ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಕ್ಕೆ ಅವರ ಮೇಲೆ ಗೂಬೆ ಕೂರಿಸಿ ವರ್ಗಾವಣೆಗೆ ಈ ನಾಟಕ ಮಾಡಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ವಿವಾದ ಉಪಶಮನ ಮಾಡಲು ಪ್ರಯತ್ನ ನಡೆಸಿದ ಸಚಿವ ಎಸ್ ಟಿ ಸೋಮಶೇಖರ್ ಕೂಡಾ ಇದು ನನ್ನ ವ್ಯಾಪ್ತಿ ಮೀರಿದೆ ಎಂದು ಅಸಹಾಯಕರಾಗಿ ಕೈ ಚೆಲ್ಲಿ ಕುಳಿತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಶಿಲ್ಪಾ ನಾಗ್ ರಾಜೀನಾಮೆ ಅಂಗೀಕರಿಸಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments