Webdunia - Bharat's app for daily news and videos

Install App

ಯೋಧನ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಡಿಸಿ

Webdunia
ಶುಕ್ರವಾರ, 15 ಫೆಬ್ರವರಿ 2019 (15:49 IST)
ವೀರಸ್ವರ್ಗವನ್ನು ಅಪ್ಪಿದ ಸಕ್ಕರೆ ನಾಡಿನ ಮೃತ ಯೋಧನ ಕುಟುಂಬಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಾಂತ್ವನ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್ (33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್. ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡರು.

ಮೃತರ ಶರೀರ ಇಂದು ಅಥವಾ ನಾಳೆ ಸ್ವ-ಗ್ರಾಮಕ್ಕೆ ವಾಪಸ್ಸಾಗಲಿದೆ. ಆದರೆ ಇನ್ನೂ ನಾವು ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇವೆ. ಅದು ಬಂದ ನಂತರ ಇದೇ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಅವರು ಹೇಳಿದರು.

ಈಗಾಗಲೇ ನಾನು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತ್ಯಕ್ರಿಯೆಗಾಗಿ ತಾಲೂಕು ಆಡಳಿತದಿಂದ ಎರಡು ಜಾಗವನ್ನು ಗುರುತಿಸಿದ್ದೇವೆ. ಎರಡರಲ್ಲಿ ಯಾವುದು ಸೂಕ್ತ ಎನ್ನುವುದನ್ನು ನೋಡಿ ಅಂತಿಮ ಮಾಡುತ್ತೇವೆ.

ಗುರು ಹುತಾತ್ಮರಾದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದ್ರೆ ದೆಹಲಿಯಲ್ಲಿರುವ ಸಿಆರ್ ಪಿ ಎಫ್ ಕಚೇರಿಗೆ ಕರೆ ಮಾಡಿ ಕೇಳಿದಾಗ ಸಾವಾಗಿರುವುದು ನಿಶ್ಚಿತ ಎಂಬ ಮಾಹಿತಿ ಲಭಿಸಿದೆ ಎಂದು ಅವರು ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments