Select Your Language

Notifications

webdunia
webdunia
webdunia
Sunday, 6 April 2025
webdunia

ಜಿಲ್ಲಾಧಿಕಾರಿಗಳಿಗೆ ಧಮ್ಕಿ ಪ್ರಕರಣ: ಸಿಎಂ ಆಪ್ತ ಮರಿಗೌಡಗೆ ಜಾಮೀನು!

ಕನ್ನಡ ಪ್ರಾದೇಶಿಕ
ಮೈಸೂರು , ಗುರುವಾರ, 25 ಆಗಸ್ಟ್ 2016 (16:26 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡಗೆ ಜಾಮೀನು ಮಂಜೂರಾಗಿದೆ.  
 
ಮೈಸೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಕೆ.ಮರಿಗೌಡನಿಗೆ ಜಾಮೀನು ಮಂಜೂರು ಮಾಡಿದೆ.
 
ತಹಶೀಲ್ದಾರ್ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ, ಮೈಸೂರು ಜಿಲ್ಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಕುರಿತು ಜಿಲ್ಲಾಧಿಕಾರಿಯವರು ನಜರ್‌ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 
 
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಕೆ.ಮರಿಗೌಡ, ಅಗಸ್ಟ್ 3 ರಂದು ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದರು. ಕಳೆದ 22 ದಿನಗಳಿಂದ ಜೈಲುವಾಸ ಅನುಭವಿಸಿದ ಬಳಿಕ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಿ.ವಿ.ಸಿಂಧು ಹೆಸರನ್ನೇ ಮರೆತ ಹರಿಯಾಣ ಮುಖ್ಯಮಂತ್ರಿ