Webdunia - Bharat's app for daily news and videos

Install App

‘ಡಿಸಿ ಸಸಿಕಾಂತ್ ಸೆಂಥಿಲ್ ಭ್ರಷ್ಟ ಅಲ್ಲ’

Webdunia
ಭಾನುವಾರ, 8 ಸೆಪ್ಟಂಬರ್ 2019 (20:03 IST)
ಐಎ‌ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿಚಾರಕ್ಕೆ ಮಾಜಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಹೇಳಿಕೆ ನೀಡಿದ್ದು, ಸಸಿಕಾಂತ್ ಸೆಂಥಿಲ್ ಅವರಿಗೆ ದೇಶದ ಆಡಳಿತ ಯಂತ್ರದ ಬಗ್ಗೆ ಅಸಮಾಧಾನವಿದೆ. ಸೆಂಥಿಲ್ ಒಬ್ಬ ಪ್ರಾಮಾಣಿಕ ಮತ್ತು ಜನಪರ ಜಿಲ್ಲಾಧಿಕಾರಿಯಾಗಿದ್ದಾರೆ.

ಸೆಂಥಿಲ್ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿಲ್ಲ. ಡಿ.ಕೆ.ರವಿ ಆತ್ಮಹತ್ಯೆ ಆದಾಗ ರಾಜಕೀಯ ಮಾಡಿದ್ದು ಬಿಜೆಪಿಯವರು.

ನಾವು ಉತ್ತಮ ಅಧಿಕಾರಿ ಸೆಂಥಿಲ್ ಇರಬೇಕು ಅಂತ ಪ್ರತಿಭಟನೆ ಮಾಡಿದ್ದೇವೆ. ಸಾವಿನಲ್ಲಿ ಕೀಳು ಮಟ್ಟದ ರಾಜಕೀಯ ಈ ಜಿಲ್ಲೆಯಲ್ಲಿ ಮಾಡಿದ್ದು ಬಿಜೆಪಿಯವರು. ಮರಳು ವಿಚಾರದಲ್ಲಿ ಡಿಸಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ‌ಕೆಲಸ ಮಾಡಿದ್ದಾರೆ.
ಸೆಂಥಿಲ್ ‌ಪ್ರಾಮಾಣಿಕತೆ ಬಗ್ಗೆ ಈವರೆಗೆ ಯಾರೂ ಮಾತನಾಡಿಲ್ಲ. ಆದ್ರೆ ಇನ್ನು ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ ಇಂಥ ಕುಕೃತ್ಯ ಶುರುವಾಗುತ್ತದೆ ಎಂದ್ರು.

ಲಾರಿ ‌ಮಾಲಕರ ಸಂಘ ಸೇರಿ ಬೇರೆ ರೀತಿಯಲ್ಲಿ ಆರೋಪಕ್ಕೆ ಸಂಘಟನೆಗಳನ್ನ ಬಳಸಲಾಗುತ್ತದೆ. ಸಸಿಕಾಂತ್ ಸೆಂಥಿಲ್ ಭ್ರಷ್ಟ ಎನ್ನುವುದನ್ನ ನಾನು ಒಪ್ಪಲ್ಲ, ಇದು ನಿರಾಧಾರ ಎಂದ್ರು.

ಮೊನ್ನೆಯವರೆಗೆ ಬಿಜೆಪಿ ಮುಖಂಡರು ಕೂಡ ಸೆಂಥಿಲ್ ಒಳ್ಳೆಯ ಅಧಿಕಾರಿ ಅಂದಿದ್ದಾರೆ. ಈಗ ಅವರನ್ನ ತಪ್ಪಿತಸ್ಥರನ್ನಾಗಿ  ಮಾಡುವ ಕೆಲಸ ನಡೆಯುತ್ತಿದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments