Publish Date: Fri, 01 May 2020 (16:42 IST)
Updated Date: Fri, 01 May 2020 (16:43 IST)
ಖಾಸಗಿ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನೂ ಕೆಲವು ಆಸ್ಪತ್ರೆಗಳು ತೆರೆಯದೆ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ತಕ್ಷಣ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.