ಆಟೋರಿಕ್ಷಾಗಳಿಗೆ ಹೋಲೋಗ್ರಾಂ ಅಳವಡಿಕೆಗೆ ಕಡ್ಡಾಯ ಎಂದ ಡಿಸಿ

Webdunia
ಸೋಮವಾರ, 8 ಅಕ್ಟೋಬರ್ 2018 (16:11 IST)
ಮಹಾನಗರದಲ್ಲಿ ಪರವಾನಿಗೆ ಇಲ್ಲದ ಆಟೋರಿಕ್ಷಾಗಳ ಓಡಾಟವನ್ನು ತಡೆಯುವ ನಿಟ್ಟಿನಲ್ಲಿ ಪರವಾನಿಗೆ ಪಡೆದ ಆಟೋರಿಕ್ಷಾಗಳಿಗೆ 15 ದಿನದೊಳಗಾಗಿ ಹೋಲೋಗ್ರಾಂ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಡಿಸಿ ಆರ್.ವೆಂಕಟೇಶ್ ಕುಮಾರ, ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ, ಟ್ರಾಫೀಕ್ ಪೊಲೀಸ್ ಅಧಿಕಾರಿ, ಆಟೋರಿಕ್ಷಾ ಯೂನಿಯನ್ ಅಧ್ಯಕ್ಷರು ಹಾಗೂ ಎನ್.ಇ.ಕೆ.ಆರ್.ಟಿ.ಸಿ. ಡಿವಿಜನ್-1ರ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಬೇಕು. 15 ದಿನದೊಳಗಾಗಿ ನಗರದಲ್ಲಿ ಪ್ರೀಪೇಡ್ ಆಟೋಸ್ಟ್ಯಾಂಡ್, ಆಟೋಗಳಿಗೆ ದರ ನಿಗದಿ,  ಆಟೋರಿಕ್ಷಾ ನಿಲ್ದಾಣಗಳನ್ನು ಗುರುತಿಸಿ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ಪರವಾನಿಗೆ ಇಲ್ಲದೇ ನಗರದಲ್ಲಿ ಸಂಚರಿಸುವ ಆಟೋ ರಿಕ್ಷಾಗಳನ್ನು ಟ್ರಾಫೀಕ್ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತಿದಿನ ತಪಾಸಣೆ ಕೈಗೊಂಡು ದಂಡ ವಿಧಿಸಬೇಕು ಹಾಗೂ ಪರವಾನಿಗೆ ಇಲ್ಲದ ಆಟೋರಿಕ್ಷಾಗಳ ಚೆಸ್ಸಿ, ಇಂಜಿನ್ ಹಾಗೂ ವಾಹನ ನೋಂದಣಿ ಸಂಖ್ಯೆ ನಮೂದಿಸಿಕೊಳ್ಳಬೇಕು. ಈ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ದಾಖಲಿಸಿದಲ್ಲಿ ತಪಾಸಣೆ ಕೈಗೊಂಡಾಗ ದಂಡ ಭರಿಸಿ ಮತ್ತೆ ನಗರದಲ್ಲಿ ಸಂಚರಿಸುವ ಆಟೋರಿಕ್ಷಾಗಳ ಮಾಹಿತಿ ನಿಖರವಾಗಿ ಲಭ್ಯವಾಗುತ್ತದೆ. ಎರಡನೇ ಬಾರಿ ದಂಡಕ್ಕೆ ಒಳಗಾಗುವ ಆಟೋರಿಕ್ಷಾಗಳ ನೋಂದಣಿಯನ್ನು ರದ್ದುಗೊಳಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments