Select Your Language

Notifications

webdunia
webdunia
webdunia
webdunia

ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರ; ಕೆ.ಎನ್ ರಾಜಣ್ಣಗೆ ಬಿಗ್ ರಿಲೀಫ್ ನೀಡಿದ ಕೋರ್ಟ್

ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರ; ಕೆ.ಎನ್ ರಾಜಣ್ಣಗೆ ಬಿಗ್ ರಿಲೀಫ್ ನೀಡಿದ ಕೋರ್ಟ್
ಬೆಂಗಳೂರು , ಶನಿವಾರ, 27 ಜುಲೈ 2019 (10:50 IST)
ಬೆಂಗಳೂರು : ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್ ರಾಜಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.




ಕೆ.ಎನ್ ರಾಜಣ್ಣ ಅಧ್ಯಕ್ಷರಾಗಿದ್ದ ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿತ್ತು. ತುಮಕೂರು ಕ್ಷೇತ್ರದಲ್ಲಿ ಹೆಚ್.ಡಿ.ದೇವೇಗೌಡರು ಸೋಲನುಭವಿಸಲು ರಾಜಣ್ಣ ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜಣ್ಣನ ಮೇಲೆ ಸೇಡು ತೀರಿಸಿಕೊಳ್ಳಲು ಕುಮಾರಸ್ವಾಮಿ ಸರ್ಕಾರ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿತ್ತು ಎಂಬ ಮಾತು ಕೇಳಿ ಬಂದಿತ್ತು.


ಸರ್ಕಾರದ ಈ ವಜಾ ಆದೇಶ ಪ್ರಶ್ನಿಸಿ ರಾಜಣ್ಣ ಕೋರ್ಟ್ ಮೊರೆ ಹೋಗಿದ್ದರು. ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಧ್ಯಂತರ ಅರ್ಜಿ ಪುರಸ್ಕರಿಸಿದ ಕೋರ್ಟ್ ಸರ್ಕಾರದ ಸೂಪರ್ ಸೀಡ್ ಆದೇಶಕ್ಕೆ ತಡೆ ನೀಡಿದೆ. ಹಾಗೇ ಕೋರ್ಟ್ ಆದೇಶದ ಮೇರೆಗೆ ರಾಜಣ್ಣ ಡಿಸಿಸಿ ಬ್ಯಾಂಕ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಜೆಡಿಎಸ್ ಶಾಸಕರಿಂದ ಒತ್ತಡ