Webdunia - Bharat's app for daily news and videos

Install App

ಹುಲಿ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ ಬಂಡೆ ಡಿಕೆ ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ

Krishnaveni K
ಶನಿವಾರ, 17 ಆಗಸ್ಟ್ 2024 (14:17 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಾಜಕೀಯ ರಂಗದಲ್ಲಿ ಹುಲಿ ಎಂದೇ ಪರಿಗಣಿಸಲಾಗುತ್ತದೆ. ಈಗ ಹುಲಿ ಮೇಲೆ ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೇ ಬಂಡೆ ಎಂದೇ ಕರೆಯಿಸಿಕೊಳ್ಳುವ ಡಿಕೆ ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಹಲವು ದೂರುಗಳು ಬಂದ ಬೆನ್ನಲ್ಲೇ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್  ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಆದೇಶ ನೀಡುತ್ತಿದ್ದಂತೇ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಶುರುವಾಗಿದೆ.

ಸಿಎಂ ಬೆನ್ನಿಗೆ ನಿಂತ ಡಿಸಿಎಂ ಡಿಕೆ ಶಿವಕುಮಾರ್ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಸಚಿವ ಸಂಪುಟ, ಶಾಸಕರು ಎಲ್ಲರ ಬೆಂಬಲ ಸಿಎಂಗಿದೆ. ಈ ಪ್ರಕರಣವನ್ನು ನಾವು ಕಾನೂನು ಚೌಕಟ್ಟಿನಲ್ಲೇ ಹೋರಾಡುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ. ಮುಡಾದಿಂದ ಸಿಎಂ ಪತ್ನಿ ಪಾರ್ವತಿಗೆ ಅಕ್ರಮವಾಗಿ ಸೈಟು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಈಗ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments