ಹುಲಿ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ ಬಂಡೆ ಡಿಕೆ ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ

Krishnaveni K
ಶನಿವಾರ, 17 ಆಗಸ್ಟ್ 2024 (14:17 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಾಜಕೀಯ ರಂಗದಲ್ಲಿ ಹುಲಿ ಎಂದೇ ಪರಿಗಣಿಸಲಾಗುತ್ತದೆ. ಈಗ ಹುಲಿ ಮೇಲೆ ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೇ ಬಂಡೆ ಎಂದೇ ಕರೆಯಿಸಿಕೊಳ್ಳುವ ಡಿಕೆ ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಹಲವು ದೂರುಗಳು ಬಂದ ಬೆನ್ನಲ್ಲೇ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್  ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಆದೇಶ ನೀಡುತ್ತಿದ್ದಂತೇ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಶುರುವಾಗಿದೆ.

ಸಿಎಂ ಬೆನ್ನಿಗೆ ನಿಂತ ಡಿಸಿಎಂ ಡಿಕೆ ಶಿವಕುಮಾರ್ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಸಚಿವ ಸಂಪುಟ, ಶಾಸಕರು ಎಲ್ಲರ ಬೆಂಬಲ ಸಿಎಂಗಿದೆ. ಈ ಪ್ರಕರಣವನ್ನು ನಾವು ಕಾನೂನು ಚೌಕಟ್ಟಿನಲ್ಲೇ ಹೋರಾಡುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ. ಮುಡಾದಿಂದ ಸಿಎಂ ಪತ್ನಿ ಪಾರ್ವತಿಗೆ ಅಕ್ರಮವಾಗಿ ಸೈಟು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಈಗ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ನರೇಗಾ ಯೋಜನೆಯ ಹೆಸರು ಬದಲಾವಣೆಗೆ ಹೊಸ ಮಸೂದೆ: ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments