Webdunia - Bharat's app for daily news and videos

Install App

ಮುಸ್ಲಿಮರೂ ಆರ್ಥಿಕವಾಗಿ ಮುಂದೆ ಬರಬೇಕು ಎಂದು ಮೀಸಲಾತಿ ಕೊಟ್ಟಿದ್ದೇವೆ: ಡಿಕೆ ಶಿವಕುಮಾರ್

Krishnaveni K
ಶನಿವಾರ, 8 ಮಾರ್ಚ್ 2025 (12:42 IST)
ಬೆಂಗಳೂರು: ಕರ್ನಾಟಕ ಬಜೆಟ್ ನಲ್ಲಿ ಸರ್ಕಾರೀ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ನಮ್ಮದು ದೇಶದಲ್ಲೇ ಬೆಸ್ಟ್ ಬಜೆಟ್ ಎಂದು ಕೊಂಡಾಡಿದ್ದಾರೆ. ಜೊತೆಗೆ ಮುಸ್ಲಿಮ್ ಮೀಸಲಾತಿ ಕುರಿತಾದ ವಿಪಕ್ಷಗಳ ಟೀಕೆಗಳಿಗೂ ಉತ್ತರಿಸಿದ್ದಾರೆ.

‘ತೇಜಸ್ವಿ ಸೂರ್ಯ ಮುಸ್ಲಿಮರು ಪಂಕ್ಚರ್ ಹಾಕಿಕೊಂಡು ಇರ್ತಾರೆ ಎಂದಿದ್ದರು. ಅವರು ವಿದ್ಯಾವಂತರಿದ್ದಾರೆ, ಬುದ್ಧಿವಂತರಿದ್ದಾರೆ. ಇದೀಗ ಮುಸ್ಲಿಮರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಅವರಿಗೆಲ್ಲಾ ಸಣ್ಣ ಮಟ್ಟದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮೀಸಲಾತಿ ಕೊಟ್ಟಿದ್ದೇವೆ.

ಎಲ್ಲರಿಗೂ ಅವಕಾಶವಿರುತ್ತದೆ. ಆದರೆ ಮುಸ್ಲಿಮರು, ಪರಿಶಿಷ್ಟ ಜಾತಿಯವರಿಗೂ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಮೀಸಲಾತಿ ಕೊಟ್ಟಿದ್ದೇವೆ’ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments