Publish Date: Thu, 30 Oct 2025 (16:05 IST)
Updated Date: Thu, 30 Oct 2025 (16:08 IST)
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ವಾಕ್ಸಮರ ಜೋರಾಗಿದೆ. ಇದೀಗ ತೇಜಸ್ವಿ ಸೂರ್ಯರನ್ನು ಎಳಸು ಎನ್ನುವ ಮೂಲಕ ಡಿಸಿಎಂ ಮತ್ತೇ ಕಾಲೆಳೆದಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಅನುಭವವಿಲ್ಲದ ಆ ಹುಡುಗ ಇನ್ನು ಎಳಸು. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಇದೀಗ ಬಾಯಿಗೆ ಬಂದ ಹಾಗೇ ವದರುತ್ತಿದ್ದಾನೆ ಎಂದು ಕಿಡಿಕಾರಿದರು.
ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ ಎಂದು ಕಿಡಿ ಕಾರಿದ್ದಾರೆ.
ಗೌರವ ನೀಡಿ ಮಾತನಾಡಲು ಕರೆದರೆ ಇದೀಗ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ ಎಂದರು.
ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದು ಹೇಳಿರುವುದನ್ನು ಅದನ್ನೇ ಮತ್ತೇ ಮತ್ತೇ ಹೇಳುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು ಎಂದು ಪ್ರಶ್ನೆ ಮಾಡಿದರು.