Webdunia - Bharat's app for daily news and videos

Install App

ಡಿಸಿಎಂ ಡಿಕೆಶಿವಕುಮಾರ್ ಕಾಮಗಾರಿ ಬಿಲ್ ಬಿಡುಗಡೆಗೆ ಕಮಿಷನ್ ಆರೋಪ....!

Webdunia
ಬುಧವಾರ, 9 ಆಗಸ್ಟ್ 2023 (19:00 IST)
ರಾಜ್ಯ ಸರ್ಕಾರ ಟೇಕಾಪ್ ಆಗುತ್ತಿರುವಾಗಲೇ ಹಲವು ಅಡತಡೆಗಳು ಬರ್ತಾಯಿದ್ದಾವೆ.ಸಚಿವರ ಮೇಲೆ ಭ್ರಷ್ಟಾಚಾರ ಆರೋಪ,ಡಿಸಿಎಂ ಮೇಲೆ ಪರ್ಸಟೆಂಜ್ ಆರೋಪ,ಸಚಿವರು ಶಾಸಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕರ ಅಸಮಧಾನ ಹೀಗೆ ಪಕ್ಷದ ಒಳಗೆ ಹೊರಗು ಸರ್ಕಾರಕ್ಕೆ ಕಂಟಕ ಶುರುವಾಗಿದೆ.ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಬಿಜೆಪಿ ಸರ್ಕಾರದಲ್ಲಿ 40% ರಾಜರೋಷವಾಗಿ ಚಾಲ್ತಿಯಲ್ಲಿದೆ ಎಂದು ಕಾಂಗ್ರೆಸ್‌ ಆರೋಪಿಸಿ ಪ್ರತಿಭಟನೆ ಮಾಡುತ್ತಲೆ ರಾಜ್ಯದ ಚುಕ್ಕಾಣಿ ಹಿಡಿದಿದೆ.ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಭ್ರಷ್ಟಾಚಾರ ಮುಕ್ತವಾಗಿ ಆಡಳಿತ ಮಾಡುತ್ತೇವೆ ಎಂದು  ಘಂಟಾಘೋಷವಾಗಿ ಹೇಳಿಕೊಂಡಿತ್ತು.ಈಗಾ ಅವರದೆ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ ಈಗ ಈ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಸಚಿವರಿಂದ ಹಿಡಿದು ಡಿಸಿಎಂ ವರೆಗೂ ಕೇಳಿ ಬರುತ್ತಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಭ್ರಷ್ಟಾಚಾರ ವಿಚಾರ ಸದ್ದು ಮಾಡುತ್ತಿದೆ.ಗ್ಯಾರಂಟಿಗಳ ಜೋಶ್ ನಲ್ಲಿದ್ದ ಸರ್ಕಾರವನ್ನ ನಿದ್ದೆಗೆಡಿಸುವಾಗೆ ಸಾಲು ಸಾಲು ಆರೋಪಗಳು ಸರ್ಕಾರದ ಸುತ್ತಲು ಸುಳಿಯುತ್ತಿವೆ.ಕೃಷಿ ಸಚಿವ ಚೆಲುವರಾಯಸ್ವಾಮಿ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ.ಇತ್ತ ಡಿಸಿಎಂ ಡಿಕೆಶಿವಕುಮಾರ್ ಬೆಂಗಳೂರು ವ್ತಾಪ್ತಿಯಲ್ಲಿ ಆಗಿರುವಂತ ಕಾಮಗಾರಿಗಳ ಬಿಲ್ ಬಿಡುಗಡೆಗೆ 10 ರಿಂದ 15 ಪರ್ಸಟೆಂಜ್ ಹಣ ಕೇಳುತ್ತಿದ್ದಾರೆ.ಇದು ಸುಳ್ಳು ಅನ್ನುದಾದರೇ ಡಿಸಿಎಂ ಅವರು ನೋಣವಿನಕೇರೆ ಅಜ್ಜಯಯ್ಯನ ಮೇಲೆ ಆಣೆ ಮಾಡಿ ಹೇಳಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ.

ಡಿಸಿಎಂ ಡಿಕೆಶಿವಕುಮಾರ್ ಮೇಲೆ ನೇರವಾಗಿ ಆರೋಪ ಮಾಡಿದ್ದ ಗುತ್ತಿಗೆದಾರರು ಇಂದು ಮಾಜಿ ಸಿಎಂ ಬಿ .ಎಸ್. ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಬೆಂಗಳೂರು ಅಭಿವೃದ್ಧಿ ಸಚಿವರ ಮೇಲಿನ ದೂರು ಹೇಳಿಕೊಂಡಿದ್ದಾರೆ.ಈ ಹಿನ್ನಲೆ ಯಡಿಯೂರಪ್ಪ ಭೇಟಿ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್ ಯಾರು ಸಲಹೆ ಕೊಡ್ತಿದ್ದಾರೆ ಗೊತ್ತಿದೆ.ಹೋಗುವವರನ್ನು ಯಾರೂ ತಡೆಯೋದಕ್ಕೆ ಆಗುವುದಿಲ್ಲ.ಅವರ ಹೋರಾಟಕ್ಕೆ ನ್ಯಾಯ ಸಿಗಲಿ, ಜಯ ಸಿಗಲಿ.ಯಾರು ಎಲ್ಲಿ ಹೋಗ್ತಿದಾರೆ ಸಲಹೆ ಕೊಡ್ತಿದ್ದಾರೆ ಅನ್ನುವುದನ್ನ ನಾವೂ ಗಮನಿಸುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments