Webdunia - Bharat's app for daily news and videos

Install App

ಡಿಸಿಎಂಗೆ ಇಷ್ಟೋ ಗೊತ್ತಿಲ್ಲ ಅಂದ್ರೆ ತಿಳಿಗೇಡಿತನ: ಎಚ್ ಡಿ ಕುಮಾರಸ್ವಾಮಿ

Sampriya
ಸೋಮವಾರ, 22 ಜುಲೈ 2024 (19:51 IST)
ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಎಚ್ ಡಿ ಕುಮಾರಸ್ವಾಮಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದರು!

ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು!!

ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ.

ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ.. ಇಷ್ಟು ಸರಳ ಸಾಮರಸ್ಯ ತತ್ತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments