ಡಿಸಿಎಂ ಮನೆಗೆ ಮುತ್ತಿಗೆ ಹಾಕಿ ಚಳಿ ಬಿಡಿಸಿದ ಜನರು!

Webdunia
ಶುಕ್ರವಾರ, 25 ಅಕ್ಟೋಬರ್ 2019 (14:43 IST)
ಡಿಸಿಎಂ ಸ್ವಕ್ಷೇತ್ರದ ಜನರು ಉಪಮುಖ್ಯಮಂತ್ರಿ ನಿವಾಸದಲ್ಲಿ ಇರೋವಾಗಲೇ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ.

ಶಾಶ್ವತ ಸೂರು ಕಲ್ಪಿಸುವಂತೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆಗೆ ಸಂತ್ರಸ್ತರು  ಮುತ್ತಿಗೆ ಹಾಕಿದ್ರು.

ಬೆಳ್ಳಂಬೆಳಿಗ್ಗೆ ಕಾರಜೋಳ ಅವರ ಮನೆಗೆ  ಸಂತ್ರಸ್ತರು ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ಬಿಸಿ ಮುಟ್ಟಿಸಿ ಚಳಿ ಬಿಡಿಸಿದರು. ಯುಕೆಪಿ ಮಾದರಿಯಲ್ಲಿ  ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.  ನೆರೆ ಸಂತ್ರಸ್ತರು ಮಳೆಗೆ ನಲುಗಿ ಹೋಗಿದ್ದು, ಸತತ ಮಳೆಯಿಂದಾಗಿ ಮನೆಯಲ್ಲಿ ಜೀವಭಯದಿಂದ ಮಲಗುವ ಪರಿಸ್ಥಿತಿ ಎದುರಾಗಿದೆ.

ಅಲ್ಲದೇ  ಸೂಕ್ತ ಮನೆಯಿಲ್ಲದೇ  ಮಕ್ಕಳು, ವಯೋವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಶೀಘ್ರವೇ    ಸಂತ್ರಸ್ತರಿಗೆ ಸೂಕ್ತ ಹಾಗೂ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂರು ಒದಗಿಸಬೇಕೆಂದು ಮನವಿ ಮಾಡಿದರು.
 ಇದೇ ಸಂದರ್ಭದಲ್ಲಿ ಮಾತನಾಡಿದ ಕಾರಜೋಳ,  ಶೀಘ್ರದಲ್ಲಿಯೇ ನೆರೆ ಸಂತ್ರಸ್ತರನ್ನ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂಕ್ತ ಸೂರನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments