Webdunia - Bharat's app for daily news and videos

Install App

ಡಿಸಿಎಂ ಮನೆಗೆ ಮುತ್ತಿಗೆ ಹಾಕಿ ಚಳಿ ಬಿಡಿಸಿದ ಜನರು!

Webdunia
ಶುಕ್ರವಾರ, 25 ಅಕ್ಟೋಬರ್ 2019 (14:43 IST)
ಡಿಸಿಎಂ ಸ್ವಕ್ಷೇತ್ರದ ಜನರು ಉಪಮುಖ್ಯಮಂತ್ರಿ ನಿವಾಸದಲ್ಲಿ ಇರೋವಾಗಲೇ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ.

ಶಾಶ್ವತ ಸೂರು ಕಲ್ಪಿಸುವಂತೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆಗೆ ಸಂತ್ರಸ್ತರು  ಮುತ್ತಿಗೆ ಹಾಕಿದ್ರು.

ಬೆಳ್ಳಂಬೆಳಿಗ್ಗೆ ಕಾರಜೋಳ ಅವರ ಮನೆಗೆ  ಸಂತ್ರಸ್ತರು ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ಬಿಸಿ ಮುಟ್ಟಿಸಿ ಚಳಿ ಬಿಡಿಸಿದರು. ಯುಕೆಪಿ ಮಾದರಿಯಲ್ಲಿ  ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.  ನೆರೆ ಸಂತ್ರಸ್ತರು ಮಳೆಗೆ ನಲುಗಿ ಹೋಗಿದ್ದು, ಸತತ ಮಳೆಯಿಂದಾಗಿ ಮನೆಯಲ್ಲಿ ಜೀವಭಯದಿಂದ ಮಲಗುವ ಪರಿಸ್ಥಿತಿ ಎದುರಾಗಿದೆ.

ಅಲ್ಲದೇ  ಸೂಕ್ತ ಮನೆಯಿಲ್ಲದೇ  ಮಕ್ಕಳು, ವಯೋವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಶೀಘ್ರವೇ    ಸಂತ್ರಸ್ತರಿಗೆ ಸೂಕ್ತ ಹಾಗೂ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂರು ಒದಗಿಸಬೇಕೆಂದು ಮನವಿ ಮಾಡಿದರು.
 ಇದೇ ಸಂದರ್ಭದಲ್ಲಿ ಮಾತನಾಡಿದ ಕಾರಜೋಳ,  ಶೀಘ್ರದಲ್ಲಿಯೇ ನೆರೆ ಸಂತ್ರಸ್ತರನ್ನ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂಕ್ತ ಸೂರನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments