ಡಿಸಿಎಂ ಮನೆಗೆ ಮುತ್ತಿಗೆ ಹಾಕಿ ಚಳಿ ಬಿಡಿಸಿದ ಜನರು!

Webdunia
ಶುಕ್ರವಾರ, 25 ಅಕ್ಟೋಬರ್ 2019 (14:43 IST)
ಡಿಸಿಎಂ ಸ್ವಕ್ಷೇತ್ರದ ಜನರು ಉಪಮುಖ್ಯಮಂತ್ರಿ ನಿವಾಸದಲ್ಲಿ ಇರೋವಾಗಲೇ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ.

ಶಾಶ್ವತ ಸೂರು ಕಲ್ಪಿಸುವಂತೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆಗೆ ಸಂತ್ರಸ್ತರು  ಮುತ್ತಿಗೆ ಹಾಕಿದ್ರು.

ಬೆಳ್ಳಂಬೆಳಿಗ್ಗೆ ಕಾರಜೋಳ ಅವರ ಮನೆಗೆ  ಸಂತ್ರಸ್ತರು ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ಬಿಸಿ ಮುಟ್ಟಿಸಿ ಚಳಿ ಬಿಡಿಸಿದರು. ಯುಕೆಪಿ ಮಾದರಿಯಲ್ಲಿ  ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.  ನೆರೆ ಸಂತ್ರಸ್ತರು ಮಳೆಗೆ ನಲುಗಿ ಹೋಗಿದ್ದು, ಸತತ ಮಳೆಯಿಂದಾಗಿ ಮನೆಯಲ್ಲಿ ಜೀವಭಯದಿಂದ ಮಲಗುವ ಪರಿಸ್ಥಿತಿ ಎದುರಾಗಿದೆ.

ಅಲ್ಲದೇ  ಸೂಕ್ತ ಮನೆಯಿಲ್ಲದೇ  ಮಕ್ಕಳು, ವಯೋವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಶೀಘ್ರವೇ    ಸಂತ್ರಸ್ತರಿಗೆ ಸೂಕ್ತ ಹಾಗೂ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂರು ಒದಗಿಸಬೇಕೆಂದು ಮನವಿ ಮಾಡಿದರು.
 ಇದೇ ಸಂದರ್ಭದಲ್ಲಿ ಮಾತನಾಡಿದ ಕಾರಜೋಳ,  ಶೀಘ್ರದಲ್ಲಿಯೇ ನೆರೆ ಸಂತ್ರಸ್ತರನ್ನ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂಕ್ತ ಸೂರನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಗೇಮ್‌ ಚಟಕ್ಕೆ ಜೀವನವನ್ನೇ ಅಂತ್ಯ ಗೊಳಿಸಿದ್ರಾ ಎಂಬಿಬಿಎಸ್‌ ವಿದ್ಯಾರ್ಥಿ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್‌ ಸಿಗ್ನಲ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments