Publish Date: Tue, 28 Jul 2020 (18:17 IST)
Updated Date: Tue, 28 Jul 2020 (18:18 IST)
ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಡಿಸಿಎಂ ಕೊಂಡಾಡಿದ್ದಾರೆ.
ರಾಜಕೀಯ ಶೂನ್ಯತೆ ಮತ್ತು ನಾಯಕತ್ವದ ಕೊರತೆ ಎದುರಿಸುತ್ತಿದ್ದ ಸಂಕಷ್ಟದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಕಠಿಣ ಸವಾಲುಗಳ ನಡುವೆಯೂ ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ.
ಹೀಗಂತ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
2018 ರಲ್ಲಿ ಯಾರಿಗೂ ಬಹಮತ ಸಿಗದಿದ್ದಾಗ ರಾಜ್ಯದಲ್ಲಿ ಒಂದು ರೀತಿಯ ರಾಜಕೀಯ ಶೂನ್ಯತೆ, ಅಭಿವೃದ್ಧಿ ಹೀನ ವಾತಾವರಣ ಉಂಟಾಗಿತ್ತು. ಬಳಿಕ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಯಡಿಯೂರಪ್ಪ ಅವರು ಸ್ಥಿರ ಮತ್ತು ಅಭಿವೃದ್ಧಿಪರ ಸರಕಾರವನ್ನು ನೀಡಿದ್ದಾರೆಂದು ಡಿಸಿಎಂ ಒತ್ತಿ ಹೇಳಿದರು.