Webdunia - Bharat's app for daily news and videos

Install App

ಡಿಕೆಶಿ ಬಂಧನದ ಬಗ್ಗೆ ಕೇಳಬೇಡಿ ಎಂದು ಮಾಧ್ಯಮದವರಿಗೆ ಕೈಮುಗಿದ ಡಿಸಿಎಂ. ಕಾರಣವೇನು ಗೊತ್ತಾ?

Webdunia
ಗುರುವಾರ, 5 ಸೆಪ್ಟಂಬರ್ 2019 (12:42 IST)
ಬಾಗಲಕೋಟೆ : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನದ ವಿಚಾರವಾಗಿ ಯಾವುದೇ ಪ್ರಶ್ನೆ ಕೇಳಬೇಡಿ ಎಂದು ಡಿಸಿಎಂ ಗೋವಿಂದ ಕಾರಜೋಳ ಮಾಧ್ಯಮದವರಿಗೆ ಕೈಮುಗಿದು ಬೇಡಿಕೊಂಡಿದ್ದಾರೆ.






ಮಾಧ್ಯಮದವರು ಡಿ.ಕೆ ಶಿವಕುಮಾರ್ ಬಂಧನದ ಕುರಿತು ಡಿಸಿಎಂ ಗೋವಿಂದ ಕಾರಜೋಳ ಪ್ರಶ್ನಿಸಿದಾಗ, ‘ನಾನು ಹೇಳುವುದೇ ಒಂದಾದರೆ, ನೀವು ಮಾಧ್ಯಮದಲ್ಲಿ ಬಿಂಬಿಸುವುದೇ ಬೇರೆ ಆಗಿರುತ್ತದೆ. ಆದ್ದರಿಂದ ಕ್ಷಮಿಸಿ ಅದರ ಬಗ್ಗೆ ನನ್ನನ್ನು ಏನೂ ಕೇಳಬೇಡಿ. ಕಾನೂನು ಪ್ರಕಾರ ಏನು ಆಗುತ್ತೋ ಅದೇ ಆಗುತ್ತದೆ’ ಎಂದು ಕೈಮುಗಿದ್ದಾರೆ.


ಅಲ್ಲದೇ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಾಗುತ್ತಿರುವ ತಾರತಮ್ಯದ ಬಗ್ಗೆ ಮಾತನಾಡಿದ ಅವರು, ‘ಎಲ್ಲ ಶಾಸಕರನ್ನು ಕರೆದು ಸಭೆ ಮಾಡಿ ಸೂಚನೆ ಕೊಟ್ಟಿದ್ದೇನೆ. ಯಾವುದೇ ತಾರತಮ್ಯ ಆಗಬಾರದು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಲು ಸೂಚನೆ ಕೊಟ್ಟಿದ್ದೇನೆ ‘ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments