Webdunia - Bharat's app for daily news and videos

Install App

ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ದರ್ಬಾರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾದ್ಯಮಗಳ ಮೇಲೇ ಕಿಡಿ

Webdunia
ಗುರುವಾರ, 27 ಸೆಪ್ಟಂಬರ್ 2018 (09:38 IST)
ಬೆಂಗಳೂರು: ತಾವು ಸಂಚಾರ ಮಾಡುವಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದರ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ಮೇಲೆ ಡಿಸಿಎಂ ಪರಮೇಶ್ವರ್ ಕಿಡಿ ಕಾರಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಜನ ನಿಬಿಡ ರಸ್ತೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಸಂಚಾರ ಸ್ಥಗಿತಗೊಳಿಸಿ (ಜೀರೋ ಟ್ರಾಫಿಕ್) ಡಿಸಿಎಂ ಪರಮೇಶ್ವರ್ ವಾಹನ ಹೋಗಲು ಪೊಲೀಸರು ವ್ಯವಸ್ಥೆ ಮಾಡಿದ್ದನ್ನು ಖಾಸಗಿ ವಾಹಿನಿಗಳು ವರದಿ ಮಾಡಿ ಪ್ರಶ್ನೆ ಮಾಡಿದ್ದವು.

ಡಿಸಿಎಂ ಪರಮೇಶ್ವರ್ ಅವರ ಈ ಖಯಾಲಿಯಿಂದ ಹಲವರಿಗೆ ತೊಂದರೆಯಾಗುತ್ತಿದೆ ಎಂದು ಮಾಧ್ಯಮಗಳು ಆರೋಪಿಸಿದ್ದವು. ಅದೇ ಪ್ರಶ್ನೆಯನ್ನು ಕಾರ್ಯಕ್ರಮವೊಂದಕ್ಕೆ ಬಂದಿದ್ದ ಡಿಸಿಎಂ ಪರಮೇಶ್ವರ್ ಬಳಿ ಕೇಳಿದಾಗ ‘ನನಗೆ ಇರುವ ಅವಕಾಶ ಬಳಸಿಕೊಳ್ಳುತ್ತಿದ್ದೇನೆ. ಅದರಿಂದ ನಿಮಗೇಕೆ ಹೊಟ್ಟೆ ಉರಿ? ಹಿಂದಿನ ಗೃಹ ಸಚಿವರು ಈ ವ್ಯವಸ್ಥೆ ಬೇಡ ಎಂದಿದ್ದರು. ಆದರೆ ನಾನು ಬಳಸಿಕೊಳ್ಳುತ್ತಿದ್ದೇನೆ’ ಎಂದು ಉದ್ಧಟತನದಿಂದ ಉತ್ತರಿಸಿದ್ದಾರೆ.

ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಚಿವರು ‘ಜೀರೋ ಟ್ರಾಫಿಕ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದಕ್ಕೆ ವಿಷಾಧಿಸುತ್ತೇನೆ. ಪ್ರತಿ ನಿತ್ಯ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗುವುದರಿಂದ ಸಮಯ ಪಾಲನೆ ಅಗತ್ಯ. ಸಾಧ್ಯವಾದಷ್ಟು ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಸಮಜಾಯಿಷಿ ನೀಡಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments