Publish Date: Fri, 28 Jun 2019 (10:56 IST)
Updated Date: Fri, 28 Jun 2019 (10:57 IST)
ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.
ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿದ್ದರು. ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳನ್ನು ,ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು. 20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಟ್ರಾಫಿಕ್ ಜಾಮ್ ಕೂಡ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಡಿಸಿಎಂ ಜೀರೋ ಟ್ರಾಫಿಕ್ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇದೀಗ ಈ ವಿಚಾರ ಗಮನಿಸಿದ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.