Webdunia - Bharat's app for daily news and videos

Install App

ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

Webdunia
ಭಾನುವಾರ, 17 ಸೆಪ್ಟಂಬರ್ 2023 (13:55 IST)
ಬೆಂಗಳೂರು : ಉಪ ಮುಖ್ಯಮಂತ್ರಿ ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು ಮಾಜಿ ಸಚಿವರೂ ಆಗಿರುವ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
 
3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪತ್ರ ಬರೆಯುತ್ತೇನೆ ಅಂತ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ. 

ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದು ಹೇಳಿದ್ದಾರೆ. 

ಲೋಕಸಭೆ ಚುನಾವಣೆ ಸಮಯದಲ್ಲಿ ಇದಕ್ಕೆ ಪ್ರಾಮುಖ್ಯತೆ ಕೊಡಬಾರದು. ಅವರ ಹೇಳಿಕೆ ರಾಜಕೀಯವಾಗಿ ಪ್ರಸ್ತುತ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments