Webdunia - Bharat's app for daily news and videos

Install App

ಕಾನೂನು ಮುರಿದರೆ ಕಾಲು ಮುರಿದೀತು ಜೋಕೆ ಎಂದು ಡಿಸಿಎಂ ಹೇಳಿದ್ದೇಕೆ?

Webdunia
ಶನಿವಾರ, 15 ಡಿಸೆಂಬರ್ 2018 (15:50 IST)
ಕಾನೂನು ಮುರಿಯುವವರಿಗೆ ಪೊಲೀಸರು ಗುಂಡು ಹಾರಿಸಿ ಕಾಲು ಮುರಿಯಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರೌಡಿ ಚಟುವಟಿಕೆಗಳು, ಅಪರಾಧ ಕೃತ್ಯಗಳು ಬೇರೆಯವರಿಗೆ ತೊಂದರೆ ಕೊಟ್ಟು ಕಾನೂನು ಮುರಿಯುವ ಕೆಲಸಕ್ಕೆ ಯಾರೂ ಮುಂದಾಗಬಾರದು ಎಂದ ಅವರು, ಗಂಭೀರ ಪ್ರಮಾಣದ ಅಪರಾಧ ಕೃತ್ಯಗಳಲ್ಲಿ ತೊಡಗುವವರಿಗೆ ಗುಂಡು ಹಾರಿಸಿ ಕಾಲು ಮುರಿಯಿರಿ, ನಾವೇನು ಗುಂಡು ಹಾಕಬೇಡಿ ಎಂದು ಹೇಳುವುದಿಲ್ಲ ಎಂದು ಪೊಲೀಸರಿಗೆ ಅಭಯ ನೀಡಿದರು.

ದೇವರಜೀವನಹಳ್ಳಿಯ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಗೃಹ ಸಚಿವರೂ ಆಗಿರುವ ಪರಮೇಶ್ವರ್, ಗಂಭೀರ ಸ್ವರೂಪದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಮೊದಲು ಜೈಲಿಗೆ ಹಾಕಲಾಗುತ್ತಿತ್ತು. ಬಿಡುಗಡೆಯಾಗಿ ಬಂದ ಬಹುತೇಕ ಮಂದಿ ಮತ್ತೆ ಅಪರಾಧ ಕೃತ್ಯಗಳನ್ನು ನಡೆಸುವುದು ಸಾಮಾನ್ಯವಾಗಿತ್ತು. ಇದನ್ನು ತಪ್ಪಿಸಲು ಪೊಲೀಸರು ಕಾಲಿಗೆ ಗುಂಡು ಹಾರಿಸುವ ಹೊಸವ್ಯವಸ್ಥೆ ಕಂಡುಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಅಪರಾಧ ಕೃತ್ಯಗಳಲ್ಲಿ ತೊಡಗುವವರು ಜೈಲಿಗೆ ಹೋಗುವುದಲ್ಲದೆ ಕಾಲು ಮುರಿದುಕೊಂಡು ಜೀವನ ಪರ್ಯಂತ ನೋವು ಅನುಭವಿಸುತ್ತಾರೆ. ಹೀಗಾಗಿ, ಅಪರಾಧ ಕೃತ್ಯಗಳನ್ನು ಬಿಡುವುದು ಒಳ್ಳೆಯದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments