Webdunia - Bharat's app for daily news and videos

Install App

ಸರಕಾರ ಸುಭದ್ರವಾಗಿದೆ ಎಂದ ಡಿಸಿಎಂ

Webdunia
ಭಾನುವಾರ, 23 ಸೆಪ್ಟಂಬರ್ 2018 (18:28 IST)
ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಶಾಸಕರು ಬೇರೆ ಪಕ್ಷಕ್ಕೆ ಹೊಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ಹಣಕೋಣಕ್ಕೆ ಬಂದ  ಸಂದರ್ಭದಲ್ಲಿ ಹೇಳಿಕೆ ನೀಡಿದ ಪರಮೇಶ್ವರ್, ಪಕ್ಷದ ಯಾವ ಶಾಸಕರು ರೆಸಾರ್ಟ್ ನತ್ತ ಹೋಗುತ್ತಿಲ್ಲ. ಒಂದಿಬ್ಬರು ಅವರ ಖಾಸಗಿ ಜೀವನಕ್ಕಾಗಿ ಹೋಗಿದ್ದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ. ಇನ್ನು ಬಿಜೆಪಿಗರು ಅಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡೋ ಪ್ರಯತ್ನ ಮಾಡಿ ವಿಫಲವಾಗಿದ್ದಾರೆ. ಸರ್ಕಾರ ಬೀಳಿಸುವ ಬಿಜೆಪಿ ಕನಸ್ಸು ಯಾವುದೇ ಕಾರಣಕ್ಕೂ ನನಸಾಗುವುದಿಲ್ಲ ಎಂದರು.

ಮುಖ್ಯಮಂತ್ರಿ ದಂಗೆ ಅನ್ನುವ ಪದ ಬಳಕೆ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅವರು ಯಾವ ಸಂದರ್ಭದಲ್ಲಿ ಪದ ಬಳಕೆ ಮಾಡಿದ್ದಾರೆನ್ನುವುದು ನೋಡಲಿ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡರು.

ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು ಇದಾದ ನಂತರ ಮಾಡಲಾಗುವುದು. ಅದೇ ಸಂದರ್ಭದಲ್ಲಿ ಖಾತೆ ಬದಲಾವಣೆಯನ್ನ ಸಹ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷವೇನಿಲ್ಲ. ಸಾಮಾನ್ಯವಾಗಿ ದೇವರ ದರ್ಶನಕ್ಕಾಗಿ ಆಗಮಿಸಿದ್ದೇನೆಂದು ಪರಮೇಶ್ವರ್ ಈ ಸಂದರ್ಭದಲ್ಲಿ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments