Publish Date: Sat, 05 Jan 2019 (18:53 IST)
Updated Date: Sat, 05 Jan 2019 (18:54 IST)
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿದರು.
ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಉಪಮುಖ್ಯಮಂತ್ರಿ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಅವರ ಎಲ್ಲಾ ವೈಟಲ್ ಆರ್ಗನ್ಸ್ ಗಳು ನಾರ್ಮಲ್ ಆಗಿವೆ ಅಂತಾ ವೈದ್ಯರು ಮಾಹಿತಿ ನೀಡಿದ್ದಾರೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಅಂತಾ ಪ್ರಾರ್ಥಿಸುತ್ತೇನೆ ಎಂದರು.
ಯಾವುದೇ ಆತಂಕ ಇಲ್ಲಾ ಅಂತ ನಮಗೆ ಅನಿಸುತ್ತಿದೆ ಎಂದಿದ್ದಾರೆ. ಇನ್ನೂ ವೈದ್ಯರ ಡಾ. ಪರಮೇಶ್ ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ ಇಂದಿನ ಚಿಕಿತ್ಸೆ ಬಗೆ ವಿವರಿಸಿದ್ದಾರೆ.