ಭ್ರಷ್ಟಾಚಾರಕ್ಕೆ ಡಿಸಿಗಳು, ಸಿಇಒಗಳು ಆಸ್ಪದ ಕೊಡಬೇಡಿ : ಶಿವಕುಮಾರ್ ಎಚ್ಚರಿಕೆ

Webdunia
ಬುಧವಾರ, 13 ಸೆಪ್ಟಂಬರ್ 2023 (10:16 IST)
ಬೆಂಗಳೂರು : ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಡಿಸಿಗಳು ಹಾಗೂ ಸಿಇಒಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಡಿಸಿಗಳು, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಗಳು, ಸಿಇಒಗಳಿಗೆ ಬದ್ಧತೆಯ ಪಾಠ ಮಾಡಿದರು. ಡಿಸಿಗಳು, ಸಿಇಒಗಳು ಸರ್ಕಾರದ ಮುಖ್ಯ ಭಾಗ. ನಿಮ್ಮ ಕಾರ್ಯವೈಖರಿ ಸರ್ಕಾರದ ಹಣೆಬರಹ ನಿರ್ಧರಿಸುತ್ತದೆ.

ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ರೆವೆನ್ಯೂ ಇನ್ಸ್ಪೆಕ್ಟರ್ಗಳು, ಪಿಡಿಒಗಳ ಕಾರ್ಯವೈಖರಿ ಸರ್ಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅದರ ಬಗ್ಗೆ ಗಮನ ಹರಿಸಿ. ವೈಯಕ್ತಿಕ ಅಜೆಂಡಾ ಇಟ್ಟುಕೊಂಡು ಕೆಲಸ ಮಾಡೋದು ಬೇಡ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಸಹಕಾರ ನೀಡಿದ್ದೀರಿ. ಅದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 70% ರಷ್ಟು ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಉಳಿದುಕೊಂಡು ಕೆಲಸ ಮಾಡುತ್ತಿಲ್ಲ. ಇದರಿಂದ ಅವರು ಜನರಿಗೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದಲೂ ಸರ್ಕಾರಕ್ಕೆ ಕೆಟ್ಟ ಹೆಸರು. ಸರ್ಕಾರದ ಕೈಪಿಡಿ ನಿಯಮಗಳನ್ನು ಪಾಲಿಸಿ. ಅಧಿಕಾರಿಗಳಿಗೆ ಸಿಇಒಗಳು ಬದ್ಧತೆ ನಿಗದಿ ಮಾಡಬೇಕು ಎಂದು ಸೂಚನೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಕೇಂದ್ರ ಸ್ಥಾನದ ಮೇಲೆ ಇಸ್ರೇಲ್ ದಾಳಿ: ತುರ್ತು ಪರಿಸ್ಥಿತಿ ಘೋಷಣೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜೈನ ಮಂದಿರದ ಮುಂದೆ ಯಾಕೆ ನಾನ್ ವೆಜ್ ಬಿಸಾಕಿದ್ರಿ: ಬುರ್ಖಾಧಾರಿ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಚಿಲ್ಲರೆ ಬಾಕಿ ಮೊತ್ತಕ್ಕಾಗಿ ಕರೆ ಮಾಡಿದ ಕೆನರಾ ಬ್ಯಾಂಕ್: ರೈತನ ತಿರುಗೇಟು ಜೀವಮಾನದಲ್ಲಿ ಮರೆಯಲ್ಲ ಬ್ಯಾಂಕ್ Video

ಮುಂದಿನ ಸುದ್ದಿ
Show comments