Publish Date: Thu, 24 Nov 2022 (12:17 IST)
Updated Date: Thu, 24 Nov 2022 (12:19 IST)
ಬೆಂಗಳೂರು : ಹುಸ್ಕೂರು ಗ್ರಾಮದ ರೈಲ್ವೆ ಹಳಿ ಬಳಿ ಅನುಮಾಸ್ಪದವಾಗಿ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ.
ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಪರಸ್ಪರ ಪ್ರೀತಿಸ್ತಿದ್ದ ಯುವಕ- ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.