Webdunia - Bharat's app for daily news and videos

Install App

ಒಂದೇ ದಿನ 5 ಜನರಲ್ಲಿ ಕಾಣಿಸಿದ ಡೆಡ್ಲಿ ಕೊರೊನಾ : ಬೆಚ್ಚಿಬಿದ್ದ ಕಲಬುರಗಿ ಜಿಲ್ಲೆ

Webdunia
ಸೋಮವಾರ, 20 ಏಪ್ರಿಲ್ 2020 (12:52 IST)
ಕೊರೊನಾ ವೈರಸ್ ಗೆ ದೇಶದಲ್ಲಿ ಮೊದಲ ಸಾವು ಕಂಡಿರುವ ಕಲಬುರಗಿಯಲ್ಲಿ ಕೋವಿಡ್ – 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ ಐವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

13 ವರ್ಷದ ಬಾಲಕ, 30 ವರ್ಷದ ಮಹಿಳೆ ಸೇರಿದಂತೆ ಮೂವರು ಪುರುಷರಲ್ಲಿ ಡೆಡ್ಲಿ ಕೊರೊನಾ ಕಾಣಿಸಿಕೊಂಡಿದೆ.
ರೋಗಿ ಸಂಖ್ಯೆ 175 ರ ಸಂಪರ್ಕಕ್ಕೆ ಬಂದ 17 ವರ್ಷದ ಪುರುಷ, ರೋಗಿ ಸಂಖ್ಯೆ 205 ರ ಸಂಪರ್ಕಕ್ಕೆ ಬಂದಿರುವ 13 ವರ್ಷದ ಬಾಲಕ, ರೋಗಿ ಸಂಖ್ಯೆ 205 ರ ಸಂಪರ್ಕಕ್ಕೆ ಬಂದ 30 ವರ್ಷದ ಮಹಿಳೆ ಹಾಗೂ ರೋಗಿ ಸಂಖ್ಯೆ 177 ರ ಸಂಪರ್ಕಕ್ಕೆ ಬಂದಿರುವ 50 ವರ್ಷದ ವ್ಯಕ್ತಿ ಅಲ್ಲದೇ ರೋಗಿ ಸಂಖ್ಯೆ 205 ರ ಸಂಪರ್ಕಕ್ಕೆ ಬಂದಿರುವ 19 ವರ್ಷದ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ.
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ ಮೂವರು ಸಾವನ್ನಪ್ಪಿದ್ದರೆ, ಪಾಸಿಟಿವ್ ಕೇಸ್ ಗಳ ಸಂಖ್ಯೆ 27ಕ್ಕೆ ಏರಿಕೆಯಾದಂತಾಗಿದೆ.

ಪ್ರಾಥಮಿಕ 365, ದ್ವಿತೀಯ ಹಂತದ ಸಂಪರ್ಕದಲ್ಲಿ ಬಂದಿರುವ 1435 ಜನರನ್ನು ಗುರುತಿಸಲಾಗಿದೆ. 1047 ಜನರು ಹೋಂ ಕ್ವಾರಂಟೈನ್ ನಲ್ಲಿದ್ದರೆ, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 928 ಜನರು 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಇನ್ನು 14 ಕಂಟೈನ್ ಮೆಂಟ್ ಝೋನ್ ಗಳನ್ನು ಗುರುತಿಸಿದ್ದು, 34,690 ಮನೆಗಳನ್ನು ಸರ್ವೇ ಮಾಡಲಾಗಿದೆ. 246 ಜನರು ಐಸೋಲೇಟೆಡ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments