Select Your Language

Notifications

webdunia
webdunia
webdunia
webdunia

ಡೆಡ್ಲಿ ಕೊರೊನಾಗೆ ಸರ್ಕಾರಿ ಆಸ್ಪತ್ರೆ ವೈದ್ಯ ಬಲಿ

ಡೆಡ್ಲಿ ಕೊರೊನಾಗೆ ಸರ್ಕಾರಿ ಆಸ್ಪತ್ರೆ ವೈದ್ಯ ಬಲಿ
ತುಮಕೂರು , ಮಂಗಳವಾರ, 8 ಸೆಪ್ಟಂಬರ್ 2020 (18:10 IST)
ಡೆಡ್ಲಿ ಕೊರೋನಾ ವೈರಸ್ ಸೋಂಕು ಸರಕಾರಿ ಆಸ್ಪತ್ರೆ ವೈದ್ಯರನ್ನು ಬಲಿತೆಗೆದುಕೊಂಡಿದೆ.

ಕೋವಿಡ್ -19 ದೃಢಪಟ್ಟಿದ್ದರಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ದೇವರಾಜ್(37) ನಿಧನರಾಗಿದ್ದಾರೆ.

ಕೊರೋನಾ ವಾರಿಯರ್ಸ್ ಆಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು.

ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಣಿಗಲ್ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಬೆಳಗ್ಗೆ ತುಮಕೂರಿನ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಅವರಿಗೆ ಬಿ.ಪಿ ಸಮಸ್ಯೆ ಕೂಡ ಇತ್ತು ಎನ್ನಲಾಗಿದೆ. ವೈದ್ಯರ ಸಾವು ವೈದ್ಯ ಲೋಕಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ಡಿ.ಕುಮಾರಸ್ವಾಮಿ ಊಸರವಳ್ಳಿಯಂತೆ!