Webdunia - Bharat's app for daily news and videos

Install App

ಯುವಕನ ಜತೆ ವಾಸವಿದ್ದ ಬಾಲಕಿ ಸಾವು! ಅಂತದ್ದೇನಾಯ್ತು?

Webdunia
ಭಾನುವಾರ, 12 ಡಿಸೆಂಬರ್ 2021 (10:10 IST)
ವಿಜಯಪುರ : ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಗರದ ವಿಶ್ವೇಶ್ವರ ನಗರದಲ್ಲಿ ಇಂದು ನಡೆದಿದೆ.

ವಿಶ್ವೇಶ್ವರ ನಗರದಲ್ಲಿರುವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆಯ ಶವ ಪತ್ತೆಯಾಗಿದೆ.  ವಿಜಯಪುರ ನಗರದ ಹೊರ ಭಾಗದ ಯೋಗಾಪುರ ಕಾಲೋನಿಯ ಯುವಕ ಸಂಜು ಹುಲ್ಲೂರ ಎಂಬುವವನ ಜೊತೆಗೆ ಅಪ್ರಾಪ್ತ ಬಾಲಕಿ ವಾಸವಿದ್ದಳು ಎಂದು ತಿಳಿದು ಬಂದಿದೆ.

ಮೃತ ಅಪ್ರಾಪ್ತೆ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಯುವಕ ಸಂಜು ಜೊತೆ ಅಪ್ರಾಪ್ತ ಬಾಲಕಿ ಪ್ರೀತಿ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಸಂಜು ಹುಲ್ಲೂರ ಅಪ್ರಾಪ್ತೆಯನ್ನು ದೈಹಿಕವಾಗಿ ಬಳಸಿಕೊಂಡು ಕೊಲೆ ಮಾಡಿದ್ದಾನೆ ಎಂದು ಅಪ್ರಾಪ್ತೆಯ ಕುಟುಂಬದವರು ಆರೋಪಿಸಿದ್ದಾರೆ. ಅಪ್ರಾಪ್ತೆಯನ್ನು ಕೊಲೆಗೈದು ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆಯ ಕುಟುಂಬದವರು ಕೊಟ್ಟ ದೂರಿನ ಮೇರೆಗೆ ಆರೋಪಿ ಯುವಕ ಸಂಜು ಹುಲ್ಲೂರನನ್ನು ಪೊಲೀಸರು ಬಂಧಿಸಿದ್ದಾರೆ.  ಅಪ್ರಾಪ್ತೆ ಸಾವನ್ನು ಖಂಡಿಸಿ ಬಂಜಾರಾ ಸಮುದಾಯದವರು ನಗರದ ಗಾಂಧಿಚೌಕ್ ಬಳಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments