Webdunia - Bharat's app for daily news and videos

Install App

ಯುವಕನ ಜತೆ ವಾಸವಿದ್ದ ಬಾಲಕಿ ಸಾವು! ಅಂತದ್ದೇನಾಯ್ತು?

Webdunia
ಭಾನುವಾರ, 12 ಡಿಸೆಂಬರ್ 2021 (10:10 IST)
ವಿಜಯಪುರ : ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಗರದ ವಿಶ್ವೇಶ್ವರ ನಗರದಲ್ಲಿ ಇಂದು ನಡೆದಿದೆ.

ವಿಶ್ವೇಶ್ವರ ನಗರದಲ್ಲಿರುವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆಯ ಶವ ಪತ್ತೆಯಾಗಿದೆ.  ವಿಜಯಪುರ ನಗರದ ಹೊರ ಭಾಗದ ಯೋಗಾಪುರ ಕಾಲೋನಿಯ ಯುವಕ ಸಂಜು ಹುಲ್ಲೂರ ಎಂಬುವವನ ಜೊತೆಗೆ ಅಪ್ರಾಪ್ತ ಬಾಲಕಿ ವಾಸವಿದ್ದಳು ಎಂದು ತಿಳಿದು ಬಂದಿದೆ.

ಮೃತ ಅಪ್ರಾಪ್ತೆ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಯುವಕ ಸಂಜು ಜೊತೆ ಅಪ್ರಾಪ್ತ ಬಾಲಕಿ ಪ್ರೀತಿ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಸಂಜು ಹುಲ್ಲೂರ ಅಪ್ರಾಪ್ತೆಯನ್ನು ದೈಹಿಕವಾಗಿ ಬಳಸಿಕೊಂಡು ಕೊಲೆ ಮಾಡಿದ್ದಾನೆ ಎಂದು ಅಪ್ರಾಪ್ತೆಯ ಕುಟುಂಬದವರು ಆರೋಪಿಸಿದ್ದಾರೆ. ಅಪ್ರಾಪ್ತೆಯನ್ನು ಕೊಲೆಗೈದು ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆಯ ಕುಟುಂಬದವರು ಕೊಟ್ಟ ದೂರಿನ ಮೇರೆಗೆ ಆರೋಪಿ ಯುವಕ ಸಂಜು ಹುಲ್ಲೂರನನ್ನು ಪೊಲೀಸರು ಬಂಧಿಸಿದ್ದಾರೆ.  ಅಪ್ರಾಪ್ತೆ ಸಾವನ್ನು ಖಂಡಿಸಿ ಬಂಜಾರಾ ಸಮುದಾಯದವರು ನಗರದ ಗಾಂಧಿಚೌಕ್ ಬಳಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments