Webdunia - Bharat's app for daily news and videos

Install App

ಅಪ್ಪು ಅಭಿಮಾನಿಗಳ ಸಾವಿನ ಸಂಖ್ಯೆ ಏರಿಕೆ

Webdunia
ಬುಧವಾರ, 3 ನವೆಂಬರ್ 2021 (20:29 IST)
ಅಪ್ಪು ಅಭಿಮಾನಿಗಳ ಸಾವಿನ ಸಂಖ್ಯೆ ಏರಿಕೆಯಾಗ್ತಿದೆ. ಒಂದೇ ದಿನದಲ್ಲಿ ತುಮಕೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ರೆ, ದಾವಣಗೆರೆಯಲ್ಲಿ ಮತ್ತೊಬ್ಬ ಕೊನೆಯುಸಿರು ಎಳೆದಿದ್ದಾನೆ. ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದ ಭರತ್ ಎಂಬಾತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾನು ಅಪ್ಪು ಅಭಿಮಾನಿ, ಅಪ್ಪು ಸಾವು ಸಹಿಸಲಾಗುತ್ತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತಿದ್ದೇನೆ. ಅಪ್ಪುನಂತೆ ನನ್ನ ಕಣ್ಣು ಸಹ ದಾನ ಮಾಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಕೊನೆಗೆ ಭರತ್ ಆಸೆಯಂತೆ, ಕುಟುಂಬಸ್ಥರು ಕಣ್ಣು ದಾನ ಮಾಡಿದ್ದಾರೆ. ತುಮಕೂರಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್ ಎಂಬಾತ ಅಪ್ಪು ಅಂತಿಮ ದರ್ಶನ ಪಡೆದು ಮನೆಗೆ ಮರಳಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆ ದಾಖಲಿಸಿದ್ರೂ ಚಿಕಿತ್ಸೆ ಫಲಿಸದೇ ಕೊನೆಯುಸಿರು ಎಳೆದಿದ್ದಾನೆ. 
ಇನ್ನೂ ದಾವಣಗೆರೆಯಲ್ಲಿ ಪುನೀತ್ ನಿಧನದ ದಿನದಿಂದ ಖೀನತೆಗೊಳಗಾಗಿದ್ದ ಸಿ. ಕುಮಾರ್ ಎಂಬ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ. ಅಪ್ಪು ಅಪ್ಪಟ ಅಭಿಮಾನಿಯಾಗಿದ್ದ ಕುಮಾರ್, ಅಪ್ಪು ನಟಿಸಿರೋ ಸಿನಿಮಾ ಒಂದೂ ಬಿಡದೆ ನೋಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದೇ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments