ಮಾಜಿ ಕಾರ್ಪೋರೇಟರ್‌ ನಿಂದ ಕೊಲೆ ಬೆದರಿಕೆ

geetha
ಬುಧವಾರ, 14 ಫೆಬ್ರವರಿ 2024 (20:26 IST)
ಬೆಂಗಳೂರು : ಮಂಗಳವಾರ ರಾತ್ರಿ 11.00 ಗಂಟೆಗೆ ತನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ತನ್ನ ಮೇಲೆ ಹಲ್ಲೆ ಹಾಗೂ ಕುಟುಂಬ ಸದಸ್ಯರ ಸಹಿತ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದು, ಇದುವರೆಗೂ ಆತನ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದನದಲ್ಲಿ ಸ್ಪೀಕರ್‌ ಬಳಿ ಮಾಜಿ ಸಚಿವ ಕೆ. ಗೋಪಾಲಯ್ಯ ದೂರಿದ್ದಾರೆ. 
 
ನಗರ ಪಾಲಿಕೆಯ ಮಾಜಿ ಸದಸ್ಯ ಪದ್ಮರಾಜ್‌ ತನಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಮಾಜಿ ಸಚಿವ ಕೆ. ಗೋಪಾಲಯ್ಯ ಆರೋಪ ಮಾಡಿದ್ದಾರೆ.ಈತ ಬೆಂಗಳೂರಿನಲ್ಲಿ ಹಲವು ಅಕ್ರಮ ಕ್ಲಬ್‌ ಗಳನ್ನು ನಡೆಸುತ್ತಿದ್ದು, ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ತನಗೆ ಮಾತ್ರವಲ್ಲದೇ ಮಾಜಿ ಸಚಿವರಾದ ಎಸ್‌. ಸುರೇಶ್‌ ಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಆರ್‌ . ಅಶೋಕ್‌ ಅವರಿಗೂ ಸಹ ರಾತ್ರಿ ಹೊತ್ತು ಮದ್ಯಸೇವನೆ ಮಾಡಿ ಕರೆ ಮಾಡಿ ಕಿರುಕುಳ ನೀಡಿದ್ದಾನೆ. ಈತನನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕೆಂದು ಕೆ.ಗೋಪಾಲಯ್ಯ ಒತ್ತಾಯಿಸಿದರು. 
 
ಗೋಪಾಲಯ್ಯ ಅವರ ಮಾತಿಗೆ ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಮತ್ತು ಪ್ರತಿಪಕ್ಷನಾಯಕರಾದ ಆರ್‌. ಅಶೋಕ್‌ ಸಹ ದನಿಗೂಡಿಸಿದರು. ಒಬ್ಬ ಮಾಜಿ ಸಚಿವ, ಶಾಸಕರಿಗೇ ಈ ರೀತಿ ಬೆದರಿಕೆ ಹಾಕಿದರೆ, ಮುಂದೆ ಇಂಥ ಸ್ಥಿತಿ ಯಾವ ಶಾಸಕರಿಗೆ ಬೇಕಾದರೂ ಎದುರಾಗಬಹುದು. ಪಕ್ಷಬೇಧ ಮರೆತು ಆತನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕರು ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments