Select Your Language

Notifications

webdunia
webdunia
webdunia
webdunia

ಗುತ್ತಿಗೆದಾರನಿಗೆ ಕೊಲೆ ಬೆದರಿಕೆ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

Muniratna

Sampriya

ಬೆಂಗಳೂರು , ಶನಿವಾರ, 14 ಸೆಪ್ಟಂಬರ್ 2024 (18:21 IST)
Photo Courtesy X
ಬೆಂಗಳೂರು: ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಮುನಿರತ್ನ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಈ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಕೂಡಾ ದಾಖಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಅವರ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿ ಅವರಿದ್ದ ಸ್ಥಳವನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.  ಮುನಿರತ್ನ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

ಇನ್ನೂ ಈ ಪ್ರಕರಣ ಸಂಬಂಧ ವಶಕ್ಕೂ ಮುನ್ನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿರತ್ನ ಅವರು 'ಆ ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇದೆಲ್ಲಾ ಕಾಂಗ್ರೆಸ್ ಕುತಂತ್ರ ಎಂದು ಆರೋಪಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಬ್ಬೆದ್ದು ನಾರುತ್ತಿರುವ ಮುನಿರತ್ನ ಬಾಯಿಯನ್ನು ಮೊದಲು ಬಿಜೆಪಿ ಶುದ್ಧಿ ಮಾಡಲಿ: ಸಿದ್ದರಾಮಯ್ಯ