ಅಮಲಿನಲ್ಲಿ ಗರ್ಭಿಣಿ ಸೇರಿ ಆರು ಜನರ ಮೇಲೆ ಮಾರಣಾಂತಿಕ ಹಲ್ಲೆ!

Webdunia
ಶುಕ್ರವಾರ, 3 ಡಿಸೆಂಬರ್ 2021 (12:11 IST)
ಮೈಸೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಓರ್ವ ಮಹಿಳೆ ಹತ್ಯೆಗೈದು, ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ.
ಈರಯ್ಯ ಅಲಿಯಾಸ್ ಕುಂಡ ಎಂಬುವವನು ಎದುರುಗಡೆ ಮನೆಯವನ ಮೇಲಿನ ಸಿಟ್ಟಿಗೆ ಆತನ  ತಾಯಿಯನ್ನು ಕೊಂದಿದ್ದಾನೆ. ಅಡ್ಡ ಬಂದ ಗರ್ಭಿಣಿ ಪತ್ನಿ ಹಾಗೂ ಅತ್ತೆ, ಮಾವ ಸೇರಿ ಒಟ್ಟು ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರು ಎಂಬಲ್ಲಿ ನಡೆದಿದೆ.
ನವಿಲೂರಿನ ನಿಂಗಮ್ಮ(50) ಕೊಲೆಯಾದ ಮಹಿಳೆ. ಈರಯ್ಯ ತಡೆಯಲು ಹೋಗಿದ್ದ ಗರ್ಭಿಣಿ ಪತ್ನಿ ಮಹದೇವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಹಲ್ಲೆಗೊಳಗಾದ ಅತ್ತೆ ಗೌರಮ್ಮ ಮತ್ತು ಮಾವ ಸುರೇಶ್ ಅಲಿಯಾಸ್ ಕೂಸು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಂತಕ ಈರಯ್ಯನನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments