ಬದುಕಿರೋ ರೈತನಿಗೆ ಮರಣ ಪ್ರಮಾಣ ಕೊಟ್ರು!

Webdunia
ಭಾನುವಾರ, 30 ಜನವರಿ 2022 (13:03 IST)
ಕೋಲಾರ : ವ್ಯಕ್ತಿ ಮೃತಪಟ್ಟು ಎಷ್ಟೋ ತಿಂಗಳ ನಂತರ ಅವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ ಎಂಬ ಸಂದೇಶ, ಪ್ರಮಾಣ ಪತ್ರಗಳು ಬಂದಿರುವ ಸುದ್ದಿಗಳನ್ನು ಓದಿದ್ದೇವೆ.
 
ಅದರೆ ಬದುಕಿರುವ ವ್ಯಕ್ತಿಗೇ ಮರಣ ಪ್ರಮಾಣ ಪತ್ರ ನೀಡಿರುವ ಅಚ್ಚರಿದಾಯಕ ಪ್ರಸಂಗ ಕೋಲಾರದಲ್ಲಿ ನಡೆದಿದೆ. ಹೌದು, ಜೀವಂತವಾಗಿರುವ ರೈತನೊಬ್ಬನಿಗೆ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಕೋಲಾರ ಕಂದಾಯ ಇಲಾಖೆ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ.

ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್ (40) ಅವರಿಗೆ ಬದುಕಿರುವಾಗಲೇ ಅಧಿಕಾರಿಗಳು ಮರಣ ಪ್ರಮಾಣ ಪತ್ರ ನೀಡಿದ್ದಾರೆ. ಇದರಿಂದ ಶಾಕ್ ಆದ ರೈತ, ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪಡಿತರ ಚೀಟಿಯಲಿ ಹೆಸರು ತೆಗೆದು ಹಾಕಲಾಗಿತ್ತು. ಈ ವೇಳೆ ಸಂಬಂಧಿಕರು ಪರಿಶೀಲನೆ ನಡೆಸಿದಾಗ ಮರಣ ಪ್ರಮಾಣ ಪತ್ರ ನೀಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಮರಣ ಪ್ರಮಾಣ ಪತ್ರವನ್ನು ಅಂಗನವಾಡಿ ಕಟ್ಟಡ, ಲೋಕೋಪಯೋಗಿ ಇಲಾಖೆ ಕಟ್ಟಡ, ತಹಶಿಲ್ದಾರ್ ಕಚೇರಿ ಸೇರಿದಂತೆ ಹಲವೆಡೆ ಅಂಟಿಸಿ ಪಡಿತರ ಚೀಟಿಯಲ್ಲೂ ಹೆಸರನ್ನೂ ತೆಗೆದು ಹಾಕಲಾಗಿದೆ.

ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆ. ಜಮೀನು ಲಪಾಟಿಯಿಸುವ ಉದ್ದೇಶ ಇರಬಹುದು ಎಂದು ರೈತ ಶಿವರಾಜ್ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ, ಸರ್ಕಾರ, ಲೋಕಾಯುಕ್ತಕ್ಕೆ ಹೋದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನ್ಯಾಯಾಲಯದ ಮೋರೆ ಹೋಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments