Webdunia - Bharat's app for daily news and videos

Install App

ಸಾಲಬಾಧೆ : ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ

Webdunia
ಶುಕ್ರವಾರ, 3 ಫೆಬ್ರವರಿ 2023 (11:26 IST)
ರಾಮನಗರ : ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ರಾಮನಗರದಲ್ಲಿ ನಡೆದಿದೆ.

ಹುಟ್ಟೂರು ಬಿಟ್ಟುರೂ ಬೆಂಬಿಡದ ಸಾಲಗಾರ ಕಾಟಕ್ಕೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಜಗತ್ತನ್ನೇ ಅರಿಯದ ಮೂರು ಮುದ್ದು ಕಂದಮ್ಮಗಳು ಸೇರಿದಂತೆ 6 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮೂಲತಃ ರಾಮನಗರ ತಾಲೂಕಿನ ಕುಂಬಳಗೂಡು ನಿವಾಸಿ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಅಲ್ಲದೇ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ.

ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿದ್ದ. ಕೊನೆಗೆ ಸಾಲಕ್ಕೆ ಹೆದರಿ ಇಡೀ ಕುಟುಂಬದ ಜನರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments