Webdunia - Bharat's app for daily news and videos

Install App

ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ತೀರ್ಮಾನ

Webdunia
ಗುರುವಾರ, 25 ಅಕ್ಟೋಬರ್ 2018 (17:31 IST)
63ನೇ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

  ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಿ ನಗರೇಶ್ವರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8.30 ಗಂಟೆಗೆ ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು ಎಂದರು.  

ನಾಡದೇವಿ ತಾಯಿ ಭುವನೇಶ್ವರಿ ಭಾವಚಿತ್ರದ ಬೃಹತ್ ಮೆರವಣಿಗೆಯನ್ನು ನೆಹರೂ ಗಂಜಿನ ನಗರೇಶ್ವರ ಪ್ರೌಢಶಾಲೆಯಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರವರೆಗೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೃಷಿ, ತೋಟಗಾರಿಕೆ, ಅರಣ್ಯ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ,  ಆರೋಗ್ಯ,  ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸೇರಿದಂತೆ ಇನ್ನೀತರ ಇಲಾಖೆಯ ಸ್ತಬ್ಧಚಿತ್ರಗಳನ್ನು ನಿರ್ಮಿಸಬೇಕು. ಸ್ತಬ್ದಚಿತ್ರಗಳು ಜನರನ್ನು ಆಕರ್ಷಿಸುವಂತಾಗಬೇಕು ಎಂದರು.
ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಈ ಭಾಗದ ಸಂಸ್ಕøತಿಯನ್ನು ಬಿಂಬಿಸುವ ಡೊಳ್ಳು, ಲಂಬಾಣಿ ನೃತ್ಯ, ಚಿಟ್ಟಲಗೆಗಳಂತಹ ಒಟ್ಟು 5 ಕಲಾ ತಂಡಗಳನ್ನು ನಿಯೋಜಿಸಬೇಕು. ಮೆರವಣಿಗೆಯುದ್ದಕ್ಕು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ರಾಜ್ಯೋತ್ಸವದ ಮುನ್ನಾದಿನ ಹಾಗೂ ರಾಜ್ಯೋತ್ಸವ ದಿನದಂದು ಕಲಬುರಗಿ ಮಹಾನಗರ ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಭವನ, ಡಾ. ಎಸ್.ಎಂ.ಪಂಡಿತ ರಂಗಮಂದಿರ, ಕಲಬುರಗಿ ಮಹಾನಗರ ಪಾಲಿಕೆ ಕಚೇರಿಗಳನ್ನು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಜಗತ್ ವೃತ್ತಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಬೇಕು. ನಗರದಲ್ಲಿರುವ  ಎಲ್ಲ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಗಳಿಗೆ ದೀಪಾಲಂಕಾರಗೊಳಿಸಲು ವಾಣಿಜ್ಯ ತೆರಿಗೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಂಗಡಿ ಮಾಲೀಕರ ಮನವೋಲಿಸಬೇಕೆಂದರು.   

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments